ಬೆಂಗಳೂರು: ‘ಎತ್ತಿನಹೊಳೆ ಯೋಜನೆಗಾಗಿ ಪ್ರತ್ಯೇಕವಾದ ನೀರಾವರಿ ನಿಗಮ ಸ್ಥಾಪಿಸಲು ಸರ್ಕಾರ ಚಿಂತಿಸುತ್ತಿದೆ’ ಎಂದು ಜಲ ಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ ಶುಕ್ರವಾರ ವಿಧಾನ ಪರಿಷತ್ತಿಗೆ ತಿಳಿಸಿದರು.
ಪಶ್ಚಿಮ ಘಟ್ಟಗಳಿಂದ ಬಯಲುಸೀಮೆ ಜಿಲ್ಲೆಗಳಿಗೆ ನೀರು ಹರಿಸುವ ಸಂಬಂಧ ಬಿಜೆಪಿಯ ವೈ.ಎ. ನಾರಾಯಣಸ್ವಾಮಿ ಅವರ ಗಮನ ಸೆಳೆಯುವ ಸೂಚನೆಗೆ ಅವರು ಉತ್ತರ ನೀಡಿದರು.
‘ವಿವರವಾದ ಯೋಜನಾ ವರದಿ ಸಿದ್ಧಪಡಿಸಲು ಜಿ.ಎಸ್. ಪರಮಶಿವಯ್ಯ ಅವರ ನೇತೃತ್ವದ ತಜ್ಞರ ಸಮಿತಿಯಿಂದ ಸಲಹೆ ಪಡೆಯಲಾಗಿದೆ. ಮಾಲಾ ಕಾಲುವೆ ನಿರ್ಮಾಣದ ಬದಲು ಲಾಳಿಕೆ ಹಾಗೂ ಸುರಂಗ ಮಾರ್ಗ ನಿರ್ಮಾಣದ ಮೂಲಕ ನೀರು ಪಡೆಯುವ ಪ್ರಸ್ತಾವ ಬಂದಿದೆ ಎಂದರು.