<p><strong>ರಾಮದುರ್ಗ (ಬೆಳಗಾವಿ ಜಿಲ್ಲೆ):</strong> ‘ಶಿಕ್ಷಣ ಕ್ಷೇತ್ರದಲ್ಲಿನ ನ್ಯೂನತೆಗಳನ್ನು ಸರಿಪಡಿಸಿ, ಎಲ್ಲ ವರ್ಗದ ಜನರಿಗೂ ಉತ್ತಮ ಗುಣಮಟ್ಟದ ಶಿಕ್ಷಣ ದೊರೆಯುವಂತೆ ಮಾಡಲು ರಾಜ್ಯ ಸರ್ಕಾರ ಏಕರೂಪದ ಶಿಕ್ಷಣ ಪದ್ಧತಿ ಅನುಷ್ಠಾನಗೊಳಿಸಲು ಧೈರ್ಯ ಮಾಡಬೇಕು’ ಎಂದು ಸಾಹಿತಿ ದೇವನೂರ ಮಹಾದೇವ ಹೇಳಿದರು.<br /> <br /> ಭಾರತ ಜ್ಞಾನ ವಿಜ್ಞಾನ ಸಮಿತಿಯು ಇಲ್ಲಿಯ ಮರಾಠಾ ಮಂಗಲ ಕಾರ್ಯಾಲಯದಲ್ಲಿ ಹಮ್ಮಿಕೊಂಡಿರುವ ಎರಡು ದಿನಗಳ ‘ರಾಜ್ಯ ಮಟ್ಟದ ಶೈಕ್ಷಣಿಕ ಹಬ್ಬ’ವನ್ನು ಶುಕ್ರವಾರ ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ‘ಕೊನೆಯ ಪಕ್ಷ ಒಂದರಿಂದ ಐದನೇ ತರಗತಿವರೆಗಿನ ಶಾಲೆಗಳನ್ನು ರಾಷ್ಟ್ರೀಕರಣಗೊಳಿಸಲು ಸರ್ಕಾರ ಚಿಂತನೆ ನಡೆಸಬೇಕು. ಪ್ರತಿ ರಾಜ್ಯದಲ್ಲೂ ಪ್ರಾದೇಶಿಕ ಭಾಷೆಯನ್ನು ಕಡ್ಡಾಯಗೊಳಿಸಬೇಕು. ಆ ಪ್ರದೇಶದ ಮಕ್ಕಳು ಅದೇ ಭಾಷೆಯಲ್ಲಿಯೇ ಓದುವುದರಿಂದ ಅವರ ನಡುವಣ ಅಸಮಾನತೆ ದೂರವಾಗುತ್ತದೆ. ಆದ್ದರಿಂದ ಆರ್ಟಿಇ ಕಾನೂನನ್ನು ಕಟ್ಟುನಿಟ್ಟಾಗಿ ಅನುಸರಿಸಬೇಕು’ ಎಂದು ಅವರು ಒತ್ತಿ ಹೇಳಿದರು<br /> <br /> ‘ರಾಜಕಾರಣಿಗಳು ಮತ್ತು ವಸಾಹತುಶಾಹಿಗಳ ಹಿಡಿತದಲ್ಲಿ ಶಿಕ್ಷಣ ಕ್ಷೇತ್ರ ಸಿಲುಕಿಕೊಂಡಿದೆ. ಅಲ್ಲಿಯೂ ಪಂಕ್ತಿಭೇದ, ಜಾತಿಭೇದ, ವರ್ಗಭೇದ ತಾಂಡವಾಡುತ್ತಿದೆ. ಇಂಥ ಗುಲಾಮಗಿರಿಯಿಂದ ಶಿಕ್ಷಣ ಕ್ಷೇತ್ರ ಹೊರಬರಬೇಕು. ಈ ನಿಟ್ಟಿನಲ್ಲಿ ಆಂದೋಲನ ನಡೆಯಬೇಕಿದೆ’ ಎಂದರು.<br /> <br /> ಮುಖ್ಯಮಂತ್ರಿಯವರ ಮಾಧ್ಯಮ ಸಲಹೆಗಾರ ದಿನೇಶ್ ಅಮೀನಮಟ್ಟು ಮಾತನಾಡಿ, ‘ಇಂದಿನ ದಿನಗಳಲ್ಲಿ ಮಕ್ಕಳು ದಾರಿ ತಪ್ಪುತ್ತಿದ್ದಾರೆ ಎಂದು ಹೇಳುವುದಕ್ಕಿಂತಲೂ, ಮಕ್ಕಳಿಗಾಗಿ ಸಮಾಜ ಯಾವ ರೀತಿಯ ಪರಿಸರ ನಿರ್ಮಿಸಿದೆ ಎನ್ನುವುದು ಮುಖ್ಯ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮದುರ್ಗ (ಬೆಳಗಾವಿ ಜಿಲ್ಲೆ):</strong> ‘ಶಿಕ್ಷಣ ಕ್ಷೇತ್ರದಲ್ಲಿನ ನ್ಯೂನತೆಗಳನ್ನು ಸರಿಪಡಿಸಿ, ಎಲ್ಲ ವರ್ಗದ ಜನರಿಗೂ ಉತ್ತಮ ಗುಣಮಟ್ಟದ ಶಿಕ್ಷಣ ದೊರೆಯುವಂತೆ ಮಾಡಲು ರಾಜ್ಯ ಸರ್ಕಾರ ಏಕರೂಪದ ಶಿಕ್ಷಣ ಪದ್ಧತಿ ಅನುಷ್ಠಾನಗೊಳಿಸಲು ಧೈರ್ಯ ಮಾಡಬೇಕು’ ಎಂದು ಸಾಹಿತಿ ದೇವನೂರ ಮಹಾದೇವ ಹೇಳಿದರು.<br /> <br /> ಭಾರತ ಜ್ಞಾನ ವಿಜ್ಞಾನ ಸಮಿತಿಯು ಇಲ್ಲಿಯ ಮರಾಠಾ ಮಂಗಲ ಕಾರ್ಯಾಲಯದಲ್ಲಿ ಹಮ್ಮಿಕೊಂಡಿರುವ ಎರಡು ದಿನಗಳ ‘ರಾಜ್ಯ ಮಟ್ಟದ ಶೈಕ್ಷಣಿಕ ಹಬ್ಬ’ವನ್ನು ಶುಕ್ರವಾರ ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ‘ಕೊನೆಯ ಪಕ್ಷ ಒಂದರಿಂದ ಐದನೇ ತರಗತಿವರೆಗಿನ ಶಾಲೆಗಳನ್ನು ರಾಷ್ಟ್ರೀಕರಣಗೊಳಿಸಲು ಸರ್ಕಾರ ಚಿಂತನೆ ನಡೆಸಬೇಕು. ಪ್ರತಿ ರಾಜ್ಯದಲ್ಲೂ ಪ್ರಾದೇಶಿಕ ಭಾಷೆಯನ್ನು ಕಡ್ಡಾಯಗೊಳಿಸಬೇಕು. ಆ ಪ್ರದೇಶದ ಮಕ್ಕಳು ಅದೇ ಭಾಷೆಯಲ್ಲಿಯೇ ಓದುವುದರಿಂದ ಅವರ ನಡುವಣ ಅಸಮಾನತೆ ದೂರವಾಗುತ್ತದೆ. ಆದ್ದರಿಂದ ಆರ್ಟಿಇ ಕಾನೂನನ್ನು ಕಟ್ಟುನಿಟ್ಟಾಗಿ ಅನುಸರಿಸಬೇಕು’ ಎಂದು ಅವರು ಒತ್ತಿ ಹೇಳಿದರು<br /> <br /> ‘ರಾಜಕಾರಣಿಗಳು ಮತ್ತು ವಸಾಹತುಶಾಹಿಗಳ ಹಿಡಿತದಲ್ಲಿ ಶಿಕ್ಷಣ ಕ್ಷೇತ್ರ ಸಿಲುಕಿಕೊಂಡಿದೆ. ಅಲ್ಲಿಯೂ ಪಂಕ್ತಿಭೇದ, ಜಾತಿಭೇದ, ವರ್ಗಭೇದ ತಾಂಡವಾಡುತ್ತಿದೆ. ಇಂಥ ಗುಲಾಮಗಿರಿಯಿಂದ ಶಿಕ್ಷಣ ಕ್ಷೇತ್ರ ಹೊರಬರಬೇಕು. ಈ ನಿಟ್ಟಿನಲ್ಲಿ ಆಂದೋಲನ ನಡೆಯಬೇಕಿದೆ’ ಎಂದರು.<br /> <br /> ಮುಖ್ಯಮಂತ್ರಿಯವರ ಮಾಧ್ಯಮ ಸಲಹೆಗಾರ ದಿನೇಶ್ ಅಮೀನಮಟ್ಟು ಮಾತನಾಡಿ, ‘ಇಂದಿನ ದಿನಗಳಲ್ಲಿ ಮಕ್ಕಳು ದಾರಿ ತಪ್ಪುತ್ತಿದ್ದಾರೆ ಎಂದು ಹೇಳುವುದಕ್ಕಿಂತಲೂ, ಮಕ್ಕಳಿಗಾಗಿ ಸಮಾಜ ಯಾವ ರೀತಿಯ ಪರಿಸರ ನಿರ್ಮಿಸಿದೆ ಎನ್ನುವುದು ಮುಖ್ಯ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>