ಜೆಎಸ್ಎಸ್ ಸಭಾಂಗಣದಲ್ಲಿ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಮತ್ತು ಕದಳಿ ಮಹಿಳಾ ವೇದಿಕೆ ಜಂಟಿಯಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಬೆಂಗಳೂರು ಆಕಾಶವಾಣಿ ಕೇಂದ್ರದ ಕಾರ್ಯಕ್ರಮ ನಿರ್ದೇಶಕಿ ಸುಮಂಗಲಾ ಮುಮ್ಮಿಗಟ್ಟಿ ಅವರಿಗೆ ಪರಿಷತ್ ಅಧ್ಯಕ್ಷ ಗೊ.ರು.ಚನ್ನಬಸಪ್ಪ ಅವರು (ಬಲಗಡೆಯಿಂದ ನಾಲ್ಕನೆಯವರು) ‘ಕದಳಿ ಪ್ರಶಸ್ತಿ’ ಪ್ರದಾನ ಮಾಡಿ ಸನ್ಮಾನಿಸಿದರು. (ಎಡದಿಂದ) ನಿವೃತ್ತ ಐಎಎಸ್ ಅಧಿಕಾರಿ ಡಾ.ಸಿ.ಸೋಮಶೇಖರ್, ಕನಕಪುರದ ಮರಳೇ ಗವಿಮಠದ ಚರಮೂರ್ತಿ ಮುಮ್ಮಡಿ ಶಿವರುದ್ರ ಸ್ವಾಮೀಜಿ, ಕೇಂದ್ರೀಯ ಚಲನಚಿತ್ರ ಪ್ರಮಾಣೀಕರಣ ಮಂಡಳಿಯ ಪ್ರಾದೇಶಿಕ ಕೇಂದ್ರದ ನಿರ್ದೇಶಕ ಎಂ.ನಾಗೇಂದ್ರ, ಮಹಿಳಾ ವೇದಿಕೆಯ ಅಧ್ಯಕ್ಷೆ ಪ್ರಮಿಳಾ ಶಂಕರ್ ಮತ್ತು ಲೇಖಕಿ ಜಿ.ವಿ ರೇಣುಕಾ ಚಿತ್ರದಲ್ಲಿದ್ದಾರೆ