<p><strong>ಮಂಡ್ಯ: </strong>ದೇಶಕ್ಕೆ ಸ್ವಾತಂತ್ರ್ಯ ತಂದು ಕೊಡಲು ಮಹಾತ್ಮ ಗಾಂಧಿ ಅವರು ನಡೆಸಿದ ಅಹಿಂಸಾತ್ಮಕ ಹೋರಾಟದಲ್ಲಿ ಕವಿಗಳು ದೀವಿಟಿಗೆಳನ್ನು ಹಿಡಿದಿದ್ದರು ಎಂದು ಸಾಹಿತಿ ಡಾ.ಭೈರಮಂಗಲ ರಾಮೇಗೌಡ ಅವರು ಹೇಳಿದರು.<br /> <br /> ಕರ್ನಾಟಕ ಸಂಘದ ವತಿಯಿಂದ ಗುರುವಾರ ಆಯೋಜಿಸಿದ್ದ ‘ಸ್ವಾತಂತ್ರೋತ್ಸವ–ಒಂದು ಮೆಲುಕು’ ಹಾಗೂ ‘ಕೆ.ಟಿ. ಶಿವಲಿಂಗಯ್ಯ–ಒಂದು ನೆನೆಪು’ ಕಾರ್ಯಕ್ರಮದ ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ಕವಿಗಳು ಸ್ವಾತಂತ್ರ್ಯವನ್ನೇ ಒಂದು ವಿಚಾರವನ್ನಾಗಿ ಮಾಡಿಕೊಂಡಿದ್ದರು. ಬರವಣಿಗೆಯ ರೂಪದಲ್ಲಿ ಸ್ವಾತಂತ್ರ್ಯದ ಬಗ್ಗೆ ಹೆಚ್ಚು ಹೊತ್ತು ಕೊಟ್ಟು ಜನರಲ್ಲಿ ದೇಶಪ್ರೇಮದ ಕಿಚ್ಚು ಹಚ್ಚಿದ್ದರು ಎಂದರು.<br /> <br /> ಸಾಹಿತ್ಯ ಮತ್ತು ಸಂಸ್ಕೃತಿಗೆ ಸಂಬಂಧಿಸಿದಂತೆ ಕರ್ನಾಟಕ ಸಂಘ ಹಲವು ಕಾರ್ಯಕ್ರಮ ಹಮ್ಮಿಕೊಳ್ಳುತ್ತಾ ಬಂದಿದೆ. ಜತೆಗೆ ಹಲವು ಮಹನೀಯರನ್ನು ನೆನೆಸಿಕೊಳ್ಳುವ ಪ್ರಯತ್ನ ಶ್ಲಾಘನೀಯ ಎಂದು ಹೇಳಿದರು.<br /> <br /> ಬ್ರಿಟಿಷರ ದಬ್ಬಾಳಿಕೆಗೆ ಜನರು ನಲುಗಿ ಹೋಗಿದ್ದರು. ನಿತ್ಯ ಹೆಣ್ಣಿನ ಮೇಲೆ ನಡೆಯುತ್ತಿರುವ ದೌರ್ಜನ್ಯ, ಅತ್ಯಾಚಾರ ಪ್ರಕರಣಗಳನ್ನು ನೋಡಿದರೆ ಮತ್ತೆ ಅದೇ ದಿನಗಳು ಬರುತ್ತಿವೆಯೇನೋ ಎಂದು ಆತಂಕ ವ್ಯಕ್ತಪಡಿಸಿದರು.<br /> <br /> ಸಂಘದ ಅಧ್ಯಕ್ಷ ಪ್ರೊ.ಜಯಪ್ರಕಾಶಗೌಡ ಮಾತನಾಡಿ, ಕೆ.ಟಿ. ಶಿವಲಿಂಗಯ್ಯ ಅವರು ಕರ್ನಾಟಕ ಸಂಘವನ್ನು ಕಟ್ಟಿ ಬೆಳೆಸಿದವರು. ಜತೆಗೆ ಸಂಘಕ್ಕೆ ಹೊಸ ತಿರುವನ್ನು ತಂದು ಕೊಟ್ಟವರು. ನೆರೆ–ಹೊರೆಯವರ ಕಷ್ಟಗಳಿಗೆ ಸ್ಪಂದಿಸುವ ಮನೋಭಾವ ಹೊಂದಿದ್ದರು ಎಂದು ಹೇಳಿದರು.<br /> <br /> ಪ್ರೊ.ಮ. ರಾಮಕೃಷ್ಣ, ಸಾಹಿತಿ ಡಾ. ಲಿಂಗರಾಜಯ್ಯ ಬೆಳಕೆರೆ ಹಾಜರಿದ್ದರು. ಇದೇ ಸಂದರ್ಭದಲ್ಲಿ ಸ್ವಾತಂತ್ರ್ಯ ಹೋರಾಟ ಕುರಿತ ಹಿರಿಯ ಕವಿಗಳು ರಚಿಸಿದ ಕವನಗಳನ್ನು ವಾಚಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ: </strong>ದೇಶಕ್ಕೆ ಸ್ವಾತಂತ್ರ್ಯ ತಂದು ಕೊಡಲು ಮಹಾತ್ಮ ಗಾಂಧಿ ಅವರು ನಡೆಸಿದ ಅಹಿಂಸಾತ್ಮಕ ಹೋರಾಟದಲ್ಲಿ ಕವಿಗಳು ದೀವಿಟಿಗೆಳನ್ನು ಹಿಡಿದಿದ್ದರು ಎಂದು ಸಾಹಿತಿ ಡಾ.ಭೈರಮಂಗಲ ರಾಮೇಗೌಡ ಅವರು ಹೇಳಿದರು.<br /> <br /> ಕರ್ನಾಟಕ ಸಂಘದ ವತಿಯಿಂದ ಗುರುವಾರ ಆಯೋಜಿಸಿದ್ದ ‘ಸ್ವಾತಂತ್ರೋತ್ಸವ–ಒಂದು ಮೆಲುಕು’ ಹಾಗೂ ‘ಕೆ.ಟಿ. ಶಿವಲಿಂಗಯ್ಯ–ಒಂದು ನೆನೆಪು’ ಕಾರ್ಯಕ್ರಮದ ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ಕವಿಗಳು ಸ್ವಾತಂತ್ರ್ಯವನ್ನೇ ಒಂದು ವಿಚಾರವನ್ನಾಗಿ ಮಾಡಿಕೊಂಡಿದ್ದರು. ಬರವಣಿಗೆಯ ರೂಪದಲ್ಲಿ ಸ್ವಾತಂತ್ರ್ಯದ ಬಗ್ಗೆ ಹೆಚ್ಚು ಹೊತ್ತು ಕೊಟ್ಟು ಜನರಲ್ಲಿ ದೇಶಪ್ರೇಮದ ಕಿಚ್ಚು ಹಚ್ಚಿದ್ದರು ಎಂದರು.<br /> <br /> ಸಾಹಿತ್ಯ ಮತ್ತು ಸಂಸ್ಕೃತಿಗೆ ಸಂಬಂಧಿಸಿದಂತೆ ಕರ್ನಾಟಕ ಸಂಘ ಹಲವು ಕಾರ್ಯಕ್ರಮ ಹಮ್ಮಿಕೊಳ್ಳುತ್ತಾ ಬಂದಿದೆ. ಜತೆಗೆ ಹಲವು ಮಹನೀಯರನ್ನು ನೆನೆಸಿಕೊಳ್ಳುವ ಪ್ರಯತ್ನ ಶ್ಲಾಘನೀಯ ಎಂದು ಹೇಳಿದರು.<br /> <br /> ಬ್ರಿಟಿಷರ ದಬ್ಬಾಳಿಕೆಗೆ ಜನರು ನಲುಗಿ ಹೋಗಿದ್ದರು. ನಿತ್ಯ ಹೆಣ್ಣಿನ ಮೇಲೆ ನಡೆಯುತ್ತಿರುವ ದೌರ್ಜನ್ಯ, ಅತ್ಯಾಚಾರ ಪ್ರಕರಣಗಳನ್ನು ನೋಡಿದರೆ ಮತ್ತೆ ಅದೇ ದಿನಗಳು ಬರುತ್ತಿವೆಯೇನೋ ಎಂದು ಆತಂಕ ವ್ಯಕ್ತಪಡಿಸಿದರು.<br /> <br /> ಸಂಘದ ಅಧ್ಯಕ್ಷ ಪ್ರೊ.ಜಯಪ್ರಕಾಶಗೌಡ ಮಾತನಾಡಿ, ಕೆ.ಟಿ. ಶಿವಲಿಂಗಯ್ಯ ಅವರು ಕರ್ನಾಟಕ ಸಂಘವನ್ನು ಕಟ್ಟಿ ಬೆಳೆಸಿದವರು. ಜತೆಗೆ ಸಂಘಕ್ಕೆ ಹೊಸ ತಿರುವನ್ನು ತಂದು ಕೊಟ್ಟವರು. ನೆರೆ–ಹೊರೆಯವರ ಕಷ್ಟಗಳಿಗೆ ಸ್ಪಂದಿಸುವ ಮನೋಭಾವ ಹೊಂದಿದ್ದರು ಎಂದು ಹೇಳಿದರು.<br /> <br /> ಪ್ರೊ.ಮ. ರಾಮಕೃಷ್ಣ, ಸಾಹಿತಿ ಡಾ. ಲಿಂಗರಾಜಯ್ಯ ಬೆಳಕೆರೆ ಹಾಜರಿದ್ದರು. ಇದೇ ಸಂದರ್ಭದಲ್ಲಿ ಸ್ವಾತಂತ್ರ್ಯ ಹೋರಾಟ ಕುರಿತ ಹಿರಿಯ ಕವಿಗಳು ರಚಿಸಿದ ಕವನಗಳನ್ನು ವಾಚಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>