<p><strong>ನವದೆಹಲಿ (ಐಎಎನ್ಎಸ್): </strong>ದೆಹಲಿ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿರುವ ಮುಕೇಶ್ ಸಿಂಗ್ ಸಂದರ್ಶನವಿರುವ ಸಾಕ್ಷ್ಯಚಿತ್ರ ಪ್ರಸಾರಕ್ಕೆ ಅವಕಾಶ ನೀಡುವುದಿಲ್ಲ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ತಿಳಿಸಿದ್ದಾರೆ.</p>.<p>ರಾಜ್ಯಸಭೆಯಲ್ಲಿ ಬುಧವಾರ ಮಾತನಾಡಿದ ಅವರು, ‘2102ರ ಡಿಸೆಂಬರ್ 16ರಂದು ನಡೆದ ಘಟನೆ ಖಂಡನೀಯ ಮತ್ತು ಆ ಘಟನೆಯಿಂದ ಲಾಭ ಮಾಡಿಕೊಳ್ಳಲು ಸರ್ಕಾರ ಯಾರಿಗೂ ಅವಕಾಶ ನೀಡುವುದಿಲ್ಲ’ ಎಂದು ಹೇಳಿದ್ದಾರೆ.</p>.<p>‘ಬಿಬಿಸಿ ವಾಹಿನಿಯು ಅಂತರರಾಷ್ಟ್ರೀಯ ಮಹಿಳಾ ದಿನವಾದ ಮಾರ್ಚ್ 8ರಂದು ಆ ಸಾಕ್ಷ್ಯಚಿತ್ರವನ್ನು ಪ್ರಸಾರ ಮಾಡಲು ಉದ್ದೇಶಿಸಿದೆ ಎಂಬುದು ನನ್ನ ಗಮನಕ್ಕೆ ಬಂದಿದೆ. ಆ ಸಾಕ್ಷ್ಯಚಿತ್ರ ಪ್ರಸಾರವನ್ನು ತಡೆಹಿಡಿಯಲಾಗುವುದು’ ಎಂದು ಅವರು ತಿಳಿಸಿದ್ದಾರೆ.</p>.<p>ಬಿಬಿಸಿ ವಾಹಿನಿಯ ಸಾಕ್ಷ್ಯಚಿತ್ರಕ್ಕಾಗಿ ಅತ್ಯಾಚಾರ ಪ್ರಕರಣದಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿರುವ ಮುಕೇಶ್ ಸಿಂಗ್ ಸಂದರ್ಶನಕ್ಕೆ ಅನುಮತಿ ನೀಡಿದ ತಿಹಾರ್ ಜೈಲಿನ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಪ್ರತಿಪಕ್ಷ ಸದಸ್ಯರು ಬುಧವಾರ ರಾಜ್ಯಸಭೆಯಲ್ಲಿ ಪಟ್ಟು ಹಿಡಿದಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಐಎಎನ್ಎಸ್): </strong>ದೆಹಲಿ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿರುವ ಮುಕೇಶ್ ಸಿಂಗ್ ಸಂದರ್ಶನವಿರುವ ಸಾಕ್ಷ್ಯಚಿತ್ರ ಪ್ರಸಾರಕ್ಕೆ ಅವಕಾಶ ನೀಡುವುದಿಲ್ಲ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ತಿಳಿಸಿದ್ದಾರೆ.</p>.<p>ರಾಜ್ಯಸಭೆಯಲ್ಲಿ ಬುಧವಾರ ಮಾತನಾಡಿದ ಅವರು, ‘2102ರ ಡಿಸೆಂಬರ್ 16ರಂದು ನಡೆದ ಘಟನೆ ಖಂಡನೀಯ ಮತ್ತು ಆ ಘಟನೆಯಿಂದ ಲಾಭ ಮಾಡಿಕೊಳ್ಳಲು ಸರ್ಕಾರ ಯಾರಿಗೂ ಅವಕಾಶ ನೀಡುವುದಿಲ್ಲ’ ಎಂದು ಹೇಳಿದ್ದಾರೆ.</p>.<p>‘ಬಿಬಿಸಿ ವಾಹಿನಿಯು ಅಂತರರಾಷ್ಟ್ರೀಯ ಮಹಿಳಾ ದಿನವಾದ ಮಾರ್ಚ್ 8ರಂದು ಆ ಸಾಕ್ಷ್ಯಚಿತ್ರವನ್ನು ಪ್ರಸಾರ ಮಾಡಲು ಉದ್ದೇಶಿಸಿದೆ ಎಂಬುದು ನನ್ನ ಗಮನಕ್ಕೆ ಬಂದಿದೆ. ಆ ಸಾಕ್ಷ್ಯಚಿತ್ರ ಪ್ರಸಾರವನ್ನು ತಡೆಹಿಡಿಯಲಾಗುವುದು’ ಎಂದು ಅವರು ತಿಳಿಸಿದ್ದಾರೆ.</p>.<p>ಬಿಬಿಸಿ ವಾಹಿನಿಯ ಸಾಕ್ಷ್ಯಚಿತ್ರಕ್ಕಾಗಿ ಅತ್ಯಾಚಾರ ಪ್ರಕರಣದಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿರುವ ಮುಕೇಶ್ ಸಿಂಗ್ ಸಂದರ್ಶನಕ್ಕೆ ಅನುಮತಿ ನೀಡಿದ ತಿಹಾರ್ ಜೈಲಿನ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಪ್ರತಿಪಕ್ಷ ಸದಸ್ಯರು ಬುಧವಾರ ರಾಜ್ಯಸಭೆಯಲ್ಲಿ ಪಟ್ಟು ಹಿಡಿದಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>