`ಪಂಚಲಿಂಗೇಶ್ವರ' ಜಾತ್ರಾ ಸಡಗರ
ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೇ ಅತ್ಯಂತ ದೊಡ್ಡದೆಂದು ಬಣ್ಣಿಸಲಾದ ವಿಟ್ಲದ ಈ ಪಂಚಲಿಂಗೇಶ್ವರ ದೇವಾಲಯಲ್ಲಿ ಇದೀಗ ಸಡಗರವೋ ಸಡಗರ. ಗ್ರಾಮದ ಪ್ರಮುಖ ರಸ್ತೆಗಳು, ರಥ ಎಳೆಯುವ ಗದ್ದೆ, ದೇವಾಲಯದ ಆವರಣ ಸೇರಿದಂತೆ ಎಲ್ಲ ಕಡೆ ಚಪ್ಪರ, ತಳಿರು ತೋರಣದ ಶೃಂಗಾರ. ಮಕ್ಕಳಿಂದ ಹಿಡಿದು ವೃದ್ಧರವರೆಗೆ ತಂಡೋಪತಂಡವಾಗಿ ಸ್ವಯಂ ಸೇವಕರಾಗಿ ಪಂಚಲಿಂಗೇಶ್ವರನ ಸೇವಾ ಕೈಂಕರ್ಯ ನಡೆಸುತ್ತಿರುವ ಜನರ ದಂಡು. ಪ್ರತಿನಿತ್ಯ ಅನ್ನದಾನ. ದೇವಾಲಯದ ಆವರಣದಲ್ಲೆಲ್ಲಾ ಭಕ್ತಾದಿಗಳಿಂದ ಬಂದ ಲೋಡುಗಟ್ಟಲೆ ಹೊರೆ ಕಾಣಿಕೆಯ ರಾಶಿ.Last Updated 21 ಜನವರಿ 2013, 19:59 IST