ಹುನಗುಂದ: ನಾಗೂರು ಕ್ರಾಸ್ ಹತ್ತಿರ ರಾಯಚೂರು–ಬೆಳಗಾವಿ ರಾಜ್ಯ ಹೆದ್ದಾರಿ 20ರಲ್ಲಿ ಬೈಕ್ ಸವಾರ ಅತಿ ವೇಗವಾಗಿ ವಾಹನ ಚಲಾಯಿಸಿ ಗೂಟದ ಕಲ್ಲಿಗೆ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡ ಸವಾರ ಆಸ್ಪತ್ರೆಗೆ ಒಯ್ಯುವಾಗ ಮಾರ್ಗಮಧ್ಯೆ ಮೃತಪಟ್ಟ ಘಟನೆ ಗುರುವಾರ ಸಂಜೆ ನಡೆದಿದೆ.
ಮೃತನನ್ನು ಹಿರೇಮಾಗಿ ಗ್ರಾಮದ ಸಿದ್ದಪ್ಪ ಫಕೀರಪ್ಪ ನರಗುಂದ (35) ಎಂದು ಗುರುತಿಸಲಾಗಿದೆ. ಬೈಕ್ನ ಹಿಂಬದಿ ಕುಳಿತಿದ್ದ ಶ್ರೀಕಾಂತ ಅಂಗಡಿ ಸಹ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಮೃತನ ತಾಯಿ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.