ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹುನಗುಂದ | ಕಲ್ಲಿಗೆ ಡಿಕ್ಕಿ: ಬೈಕ್ ಸವಾರ ಸಾವು

Published 3 ಮೇ 2024, 14:09 IST
Last Updated 3 ಮೇ 2024, 14:09 IST
ಅಕ್ಷರ ಗಾತ್ರ

ಹುನಗುಂದ: ನಾಗೂರು ಕ್ರಾಸ್ ಹತ್ತಿರ ರಾಯಚೂರು–ಬೆಳಗಾವಿ ರಾಜ್ಯ ಹೆದ್ದಾರಿ 20ರಲ್ಲಿ ಬೈಕ್ ಸವಾರ ಅತಿ ವೇಗವಾಗಿ ವಾಹನ ಚಲಾಯಿಸಿ ಗೂಟದ ಕಲ್ಲಿಗೆ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡ ಸವಾರ ಆಸ್ಪತ್ರೆಗೆ ಒಯ್ಯುವಾಗ ಮಾರ್ಗಮಧ್ಯೆ ಮೃತಪಟ್ಟ ಘಟನೆ ಗುರುವಾರ ಸಂಜೆ ನಡೆದಿದೆ.

ಮೃತನನ್ನು ಹಿರೇಮಾಗಿ ಗ್ರಾಮದ ಸಿದ್ದಪ್ಪ ಫಕೀರಪ್ಪ ನರಗುಂದ (35) ಎಂದು ಗುರುತಿಸಲಾಗಿದೆ.  ಬೈಕ್‌ನ ಹಿಂಬದಿ ಕುಳಿತಿದ್ದ ಶ್ರೀಕಾಂತ ಅಂಗಡಿ ಸಹ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಕುರಿತು ಮೃತನ ತಾಯಿ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT