ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

’ತಾಳಿಭಾಗ್ಯ ಬಗ್ಗೆ ಮಾತನಾಡಲು ಮೋದಿಗೆ ನೈತಿಕತೆ ಇಲ್ಲ’

Published 27 ಏಪ್ರಿಲ್ 2024, 16:21 IST
Last Updated 27 ಏಪ್ರಿಲ್ 2024, 16:21 IST
ಅಕ್ಷರ ಗಾತ್ರ

ಬಳ್ಳಾರಿ: ‘ಸ್ವಂತ ಪತ್ನಿಯನ್ನೇ ರಕ್ಷಣೆ ಮಾಡದ ನರೇಂದ್ರ ಮೋದಿ ಅವರಿಗೆ ತಾಳಿಭಾಗ್ಯದ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ. ಪತ್ನಿಗೆ ತಾಳಿ ಕಟ್ಟಿ, ಮೋದಿ ಅವರು ಕೆಲವೇ ವರ್ಷ ಸಂಸಾರ ಮಾಡಿದ್ದಾರೆ. ನಂತರ ಜೊತೆಗಿಲ್ಲ. ಅವರಿಗೆ ತಾಳಿ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ’ ಎಂದು ಕಾಂಗ್ರೆಸ್ ಮುಖಂಡ ವಿ.ಎಸ್.ಉಗ್ರಪ್ಪ ತಿಳಿಸಿದರು.

‘ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳೆಯರು ತಾಳಿ ಕಳೆದುಕೊಳ್ಳಬೇಕಾಗುತ್ತದೆ’ ಎಂಬ ಪ್ರಧಾನಿ ನರೇಂದ್ರ ಮೋದಿಯವರ ಹೇಳಿಕೆಗೆ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ‘ಭಾರತದಲ್ಲಿ ತಾಳಿಗಿರುವ ಗೌರವ ಎಲ್ಲೂ ಇಲ್ಲ‌. ಪತ್ನಿಯನ್ನು ರಕ್ಷಣೆ ಮಾಡಲಾಗದ ಮೋದಿ ತಾಳಿ ಬಗ್ಗೆ ಮಾತನಾಡುತ್ತಿರುವುದು ಹಿಂದೂ ಸಂಸ್ಕೃತಿಗೆ ಮಾಡಿದ ಅಪಚಾರ. ಅವರು ಯಾವ ಮುಖ ಇಟ್ಟುಕೊಂಡು ವೋಟು ಕೇಳುತ್ತಿದ್ದಾರೆ’ ಎಂದು ಪ್ರಶ್ನಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT