ಬೇರೆ ಮಹಿಳೆಯೊಂದಿಗೆ ರವಿಚಂದ್ರ ಅಕ್ರಮ ಸಂಬಂಧ ಹೊಂದಿದ್ದಾನೆ ಎಂಬ ಅನುಮಾನದೊಂದಿಗೆ ಪತ್ನಿ ವೀಣಾ ಸದಾ ಜಗಳ ತೆಗೆಯುತ್ತಿದ್ದಳು. ಇದರಿಂದ ಬೇಸತ್ತ ರವಿಚಂದ್ರ, ಪತ್ನಿ ಅರಣ್ಯಕ್ಕೆ ಕರೆದೊಯ್ದು ಕತ್ತು ಹಿಸುಕಿ ಕೊಲೆ ಮಾಡಿದ ನಂತರ ಶವವನ್ನು ಸುಟ್ಟುಹಾಕಿರುವುದಾಗಿ ತನಿಖೆಯಲ್ಲಿ ಒಪ್ಪಿಕೊಂಡಿದ್ದಾನೆ ಎಂದು ಗ್ರಾಮೀಣ ಠಾಣೆ ಇನ್ಸ್ಪೆಕ್ಟರ್ ಸಾದಿಕ್ ಪಾಷಾ ತಿಳಿಸಿದರು.