ನಾಲ್ಕನೇ ಶನಿವಾರ ಬ್ಯಾಂಕಿಗೆ ರಜೆ ಇದ್ದುದ್ದರಿಂದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಘಟನಾ ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಪುರುಷೋತ್ತಮ್, ಡಿವೈಎಸ್ಪಿ ನಾಗರಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಳ್ಳರ ಪತ್ತೆಗಾಗಿ ಬೆರಳಚ್ಚು ತಜ್ಞರು, ಶ್ವಾನದಳ ಕರೆಸಲಾಗಿತ್ತು.