ಅಧಿಕಾರಿಗಳ ಸಭೆಯ ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಕೊರೊನಾ ಹರಡುವಿಕೆ ತಡೆಗಟ್ಟುವ ಉದ್ದೇಶದಿಂದ ಮತ್ತು ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ಶಾಲೆಗಳನ್ನು ತೆರೆಯದಂತೆ ತೀರ್ಮಾನ ಕೈಗೊಳ್ಳಲಾಗಿದೆ. ಡಿಎಚ್ಒ, ಡಿಡಿಪಿಐ ಮೊದಲಾದವರೊಂದಿಗೆ ಚರ್ಚಿಸಿ ಮುಖ್ಯ ಕಾರ್ಯದರ್ಶಿ ಗಮನಕ್ಕೆ ತರಲಾಗಿದೆ ಎಂದು ಮಾಹಿತಿ ನೀಡಿದರು.