ರುಮೇವಾಡಿ ಗ್ರಾಮದ ರೈತ ರಾಜು ಘಾಡಿ ಎನ್ನುವವರು ಸೋಮವಾರ ಕಾಡಿನ ದಾರಿಯಲ್ಲಿ ಹೊರಟಿದ್ದರು. ಆಗ ವೃದ್ಧೆ ನರಳುವುದು ಕೇಳಿಸಿತು. ಹತ್ತಿರ ಹೋಗಿ ನೋಡಿದ ಅವರು ಅಜ್ಜಿಗೆ ನೀರು ಕುಡಿಸಿ ಉಪಚರಿಸಿದರು. ತಮ್ಮ ಟ್ರ್ಯಾಕ್ಟರ್ನಲ್ಲಿ ಅವರನ್ನು ಹತ್ತಿರದ ಧಾಬಾಗೆ ಕರೆತಂದರು. ಧಾಬಾ ಮಾಲೀಕ ಅನಂತ ಜುಂಜವಾಡಕರ, ಉದಯ ಕೋಳೇಕರ ಅವರು ಆಂಬುಲೆನ್ಸ್ ಕರೆಸಿ, ತಾಲ್ಲೂಕು ಆಸ್ಪತ್ರೆಗೆ ದಾಖಲಿಸಿದರು.