ಯೋಗೇಶ ಕರೋಲಿ, ಸತೀಶ್ ಸೂರ್ಯವಂಶಿ, ವಿಜಯ ಬಿಷೆ ಬಂಧಿತರು. ಇಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಸ್ಪಿ ಡಾ.ಸಂಜೀವ್ ಪಾಟೀಲ, ‘ಅಥಣಿ ಡಿವೈಎಸ್ಪಿ ಶ್ರೀಪಾದ ಜಲ್ದೆ, ಸಿಪಿಐ ರವೀಂದ್ರ ನಾಯ್ಕೋಡಿ ಮತ್ತು ಕಾಗವಾಡ ಪಿಎಸ್ಐ ಎಚ್.ಕೆ. ನರಳೆ ನೇತೃತ್ವದ ಒಂದು ವರ್ಷ ಕಾರ್ಯಾಚರಣೆ ನಡೆಸಿ, ಮೂವರು ಅಂತರರಾಜ್ಯ ಕಳ್ಳರನ್ನು ಬಂಧಿಸಿದೆ. ಅವರಿಂದ ₹7 ಲಕ್ಷ ಮೌಲ್ಯದ 36 ಪಂಪ್ಸೆಟ್, ಕೃತ್ಯಕ್ಕೆ ಬಳಸಿದ್ದ ಗೂಡ್ಸ್ ವಾಹನ ಮತ್ತು ಬೈಕ್ ವಶಪಡಿಸಿಕೊಳ್ಳಲಾಗಿದೆ’ ಎಂದರು.