ತ್ಯಾಜ್ಯ ನೀರನ್ನು ವೈಜ್ಞಾನಿಕವಾಗಿ ಎರಡನೇ ಹಂತದಲ್ಲಿ ಸಂಸ್ಕರಿಸಿ, ನಗರದ ಅಂತರ್ಜಲ ವೃದ್ಧಿಯ ದೃಷ್ಟಿಯಿಂದ ಕೆರೆಗಳಿಗೆ ತುಂಬಿಸಲಾಗುತ್ತಿದೆ. ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್ಜಿಟಿ) ಹಾಗೂ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಕಟ್ಟುನಿಟ್ಟಿನ ಮಾನದಂಡಗಳ ಆಧಾರದ ಮೇಲೆ ನೀರು ಸಂಸ್ಕರಿಸಲಾಗುತ್ತಿದೆ. ಈ ನೀರನ್ನು ನೇರವಾಗಿ ಉಪಯೋಗಿಸುವುದರಿಂದ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆಗಳಿದ್ದು, ಸಾರ್ವಜನಿಕರು ಕೆರೆಯ ನೀರನ್ನು ಬಳಸಬಾರದು ಎಂದು ಜಲಮಂಡಳಿ ಅಧ್ಯಕ್ಷ ಡಾ. ರಾಮ್ಪ್ರಸಾತ್ ಮನೋಹರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.