ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

₹40 ಲಕ್ಷದ ಚಿನ್ನಾಭರಣ ವಶ: ಇಬ್ಬರು ಆರೋಪಿಗಳ ಬಂಧನ

Last Updated 30 ಆಗಸ್ಟ್ 2022, 21:22 IST
ಅಕ್ಷರ ಗಾತ್ರ

ಬೆಂಗಳೂರು: ಮನೆ ಬಾಗಿಲು ಒಡೆದು ಚಿನ್ನಾಭರಣ ಹಾಗೂ ಬೆಳ್ಳಿಯ ಸಾಮಗ್ರಿ ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಮಹಾಲಕ್ಷ್ಮಿಪುರಂ ಪೊಲೀಸರು ಬಂಧಿಸಿದ್ದಾರೆ.

ಜೆ.ಪಿ ನಗರದ ಮಹಾವೀರ ಕ್ಲಾಸಿಕ್‌ ಅಪಾರ್ಟ್‌ಮೆಂಟ್‌ನ ನಿವಾಸಿ ಶಂಕರ (44) ಹಾಗೂ ದೊರೆಸ್ವಾಮಿ ಪಾಳ್ಯದ ರವಿ (36) ಬಂಧಿತರು.

ಬಂಧಿತರಿಂದ ₹ 40 ಲಕ್ಷ ಮೌಲ್ಯದ 800 ಗ್ರಾಂ ಚಿನ್ನಾಭರಣ ಹಾಗೂ 3 ಕೆ.ಜಿ ಬೆಳ್ಳಿ ಸಾಮಗ್ರಿ ವಶಕ್ಕೆ ಪಡೆಯಲಾಗಿದೆ.

‘ಇವರ ವಿರುದ್ಧ ಈ ಹಿಂದೆ ಎಚ್‌ಎಎಲ್‌ ಲೇಔಟ್‌, ಕೋರಮಂಗಲ, ಕೆ.ಆರ್‌.ಪುರಂ ಪೊಲೀಸ್‌ ಠಾಣೆಯಲ್ಲೂ ಪ್ರಕರಣ ದಾಖಲಾಗಿ ಬಂಧಿಸಲಾಗಿತ್ತು. ಸ್ವಲ್ಪ ದಿನಗಳು ಸುಮ್ಮನಿದ್ದ ಆರೋಪಿಗಳು ಮತ್ತೆ ಕಳ್ಳತನಕ್ಕೆ ಮುಂದಾಗಿದ್ದರು. ವರಮಹಾಲಕ್ಷ್ಮಿ ಹಬ್ಬದಂದು ಮಹಾಲಕ್ಷ್ಮಿಪುರಂ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಚಿನ್ನಾಭರಣ ಕಳವು ಮಾಡಿದ್ದರು’ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT