‘ಇವರ ವಿರುದ್ಧ ಈ ಹಿಂದೆ ಎಚ್ಎಎಲ್ ಲೇಔಟ್, ಕೋರಮಂಗಲ, ಕೆ.ಆರ್.ಪುರಂ ಪೊಲೀಸ್ ಠಾಣೆಯಲ್ಲೂ ಪ್ರಕರಣ ದಾಖಲಾಗಿ ಬಂಧಿಸಲಾಗಿತ್ತು. ಸ್ವಲ್ಪ ದಿನಗಳು ಸುಮ್ಮನಿದ್ದ ಆರೋಪಿಗಳು ಮತ್ತೆ ಕಳ್ಳತನಕ್ಕೆ ಮುಂದಾಗಿದ್ದರು. ವರಮಹಾಲಕ್ಷ್ಮಿ ಹಬ್ಬದಂದು ಮಹಾಲಕ್ಷ್ಮಿಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಚಿನ್ನಾಭರಣ ಕಳವು ಮಾಡಿದ್ದರು’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.