ಕವಿ ಜಯಂತ ಕಾಯ್ಕಿಣಿ, ‘ಬರಹಗಾರ ಬದುಕಿನ ಕಟ್ಟಳೆಗಳಿಂದ ಹೊರಗೆ ಬಂದು ಬರೆಯಬೇಕು.ಬದುಕಿನ ಕಟ್ಟಳೆಗಳನ್ನು ಮುರಿದು ಬರೆದರೆ ಮಾತ್ರ ಅದು ಅನುಭವದ್ರವ್ಯವಾಗುತ್ತದೆ. ಕಟ್ಟಲೆಗಳು ಸೃಜನಶೀಲತೆಯನ್ನು ಕಟ್ಟಿಹಾಕುತ್ತದೆ.ತಾವು ಬರೆದದ್ದನ್ನು ತಾವೇ ವಿಮರ್ಶಿಸಿ, ಕಾವ್ಯ ಗುಣದೋಷಗಳನ್ನು ಗುರುತಿಸಿದಾಗ ಮಾತ್ರ ಲೇಖಕ ಬೆಳೆಯಲು ಸಾಧ್ಯ. ಬರಹಗಾರರಿಗೆಓದುವ ಹವ್ಯಾಸ ಇರಬೇಕು. ಸಹಬಾಳ್ವೆ ಮತ್ತು ಸಮಾನ ಮನಸ್ಸು ಇದ್ದಾಗ ಮಾತ್ರ ಒಳ್ಳೆಯ ಸಾಹಿತ್ಯ ಸೃಷ್ಟಿಯಾಗುತ್ತದೆ’ ಎಂದು ಹೇಳಿದರು.