‘ಬೆಂಗಳೂರಿಗೆ ಬಹುಪಾಲು ತರಕಾರಿ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಮತ್ತು ರಾಮನಗರ ಜಿಲ್ಲೆಯಿಂದ ಸರಬರಾಜಾಗುತ್ತಿದೆ. ಈ ಜಿಲ್ಲೆಗಳು ನೀರಾವರಿಯಿಂದ ವಂಚಿತವಾಗಿವೆ. ರಾಮನಗರ ಜಿಲ್ಲೆ ಹೊರತುಪಡಿಸಿ ಉಳಿದ ಮೂರು ಜಿಲ್ಲೆಗಳಿಗೆ ಕೊಳಚೆ ನೀರು ಸಂಸ್ಕರಿಸಿ, ಕೆರೆಗಳನ್ನು ತುಂಬಿಸಲಾಗುತ್ತಿದೆ. ನೀರಾವರಿಯಿಂದ ವಂಚಿತವಾಗಿರುವ ಈ ಜಿಲ್ಲೆಗಳಲ್ಲಿನ ಬಹುಪಾಲು ರೈತರು ಅರೆ ಬರೆ ಸಂಸ್ಕರಿಸಿದ ಬೆಂಗಳೂರಿನ ಕೊಳಚೆ ನೀರು ಬಳಸಿ, ತರಕಾರಿಗಳನ್ನು ಬೆಳೆಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಎಂಪ್ರಿಯ ಅಧ್ಯಯನವು 2022ರ ನವೆಂಬರ್ನಲ್ಲಿ ಪ್ರಕಟವಾಗಿದೆ. ಆದರೆ, ಈ ಬಗ್ಗೆ ಸರ್ಕಾರ ಯಾವುದೇ ಕ್ರಮ ಕೈಗೊಳ್ಳದಿರುವುದು ವಿಪರ್ಯಾಸ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.