‘ನಗರಸಭೆಯವರು ಜನರಲ್ಲಿ ಈ ಬಗ್ಗೆ ಎಚ್ಚರಿಕೆಯನ್ನೂ ನೀಡಿಲ್ಲ. ಚರಂಡಿಯ ದುರ್ನಾತ ದಿನೇ ದಿನೇ ಹೆಚ್ಚುತ್ತಿದೆ. ಎರಡು ತಿಂಗಳಿನಿಂದ ಮಡುಗಟ್ಟಿ ಕಕ್ಕಸದ ತ್ಯಾಜ್ಯದ ದುರ್ನಾತಕ್ಕೆ ಸ್ಥಳೀಯರು, ವಿದ್ಯಾರ್ಥಿಗಳು ಮೂಗು ಮುಚ್ಚಿ ಓಡಾಡುತ್ತಿದ್ದಾರೆ. ಈಗ ರಸ್ತೆಯಲ್ಲಿರುವ ಅಂಗಡಿ ಮಳಿಗೆಗಳ ಮಾಲೀಕರ ವ್ಯಾಪಾರಕ್ಕೆ ಪೆಟ್ಟು ಬಿದ್ದಿದೆ. ಒಮ್ಮೆಯೂ ನಗರಸಭೆ, ಆರೋಗ್ಯ ಇಲಾಖೆಯ ಸ್ಥಳೀಯರನ್ನು ಎಚ್ಚರಿಸುವ ಗೋಜಿಗೆ ಹೋಗಿಲ್ಲ’ ಎಂದು 3ನೇ ವಾರ್ಡ್ ನಿವಾಸಿ ಮೂರ್ತಿ ಅಸಮಾಧಾನ ವ್ಯಕ್ತಪಡಿಸಿದರು.