ಕೇಂದ್ರ ಸರ್ಕಾರವು ವಿದ್ಯಾರ್ಥಿ ಗಳಿಂದ ‘ನಿನಗೆ ಗೊತ್ತಿರುವ ಸ್ವಾತಂತ್ರ್ಯ ಹೋರಾಟಗಾರ’ ಎಂಬ ವಿಷಯದ ಬಗ್ಗೆ ಅಭಿಪ್ರಾಯ ಆಹ್ವಾನಿಸಿತ್ತು. ರಾಜ್ಯದ 65,558 ವಿದ್ಯಾರ್ಥಿಗಳು ಸ್ವಾತಂತ್ರ್ಯ ಹೋರಾಟಗಾರರ ಬಗ್ಗೆ ಅಭಿಪ್ರಾಯ ಬರೆದು ಕೇಂದ್ರ ಸರ್ಕಾರದ ವೆಬ್ಸೈಟ್ಗೆ ಅಪ್ಲೋಡ್ ಮಾಡಿದ್ದರು. 15,829 ಶಿಕ್ಷಕರು, 5,751 ಪೋಷಕರು ನೋಂದಣಿ ಮಾಡಿಕೊಂಡಿದ್ದರು. ಇದರಲ್ಲಿ ತಾಲ್ಲೂಕಿನ ಹನುಮಂತದೇವರ ಕಣಿವೆಯ ಮೊರಾರ್ಜಿ ದೇಸಾಯಿ ಶಾಲೆಯ ಮಿಥುನ್ ಬಿ. ನಾಯ್ಕ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಸರ್ಕಾರಿ ಪ್ರೌಢಶಾಲೆಯ ಆರ್. ಪ್ರಕೃತಿ ಹಾಗೂ ಇದೇ ಶಾಲೆಯ ಶಿಕ್ಷಕಿ ಎಂ.ಎಸ್. ವರ್ಧಿನಿ ‘ಪರೀಕ್ಷಾ ಪೇ’ ಚರ್ಚಾ ಕಾರ್ಯಕ್ರಮಕ್ಕೆ ಆಯ್ಕೆಯಾಗಿದ್ದಾರೆ.