ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪುತ್ತೂರು | ಉದ್ಯೋಗ ಆಮಿಷ; ₹2.25 ಲಕ್ಷ ಕಳೆದುಕೊಂಡ ಯುವತಿ

Published 25 ಜನವರಿ 2024, 14:28 IST
Last Updated 25 ಜನವರಿ 2024, 14:28 IST
ಅಕ್ಷರ ಗಾತ್ರ

ಪುತ್ತೂರು: ಪತ್ರಿಕೆಯೊಂದರಲ್ಲಿ ಪ್ರಕಟಗೊಂಡಿದ್ದ ಉದ್ಯೋಗದ ಜಾಹೀರಾತನ್ನು ನಂಬಿ, ಉದ್ಯೋಗದ ಆಸೆಯಿಂದ ವಂಚಕರ ಖಾತೆಗೆ ₹ 2.25 ಲಕ್ಷ ಹಣ ಜಮೆ ಮಾಡಿ ಯುವತಿಯೊಬ್ಬರು ಮೋಸ ಹೋಗಿದ್ದಾರೆ.  ಆರ್ಯಾಪು ಗ್ರಾಮದ ಒಳತ್ತಡ್ಕ ನಿವಾಸಿ ನಿಶ್ಮಿತಾ (24) ವಂಚನೆಗೊಳಗಾದ ಯುವತಿ.

ಪತ್ರಿಕೆ  ಜಾಹೀರಾತಿನಲ್ಲಿ ನೀಡಲಾಗಿದ್ದ ಮೊಬೈಲ್ ಸಂಖ್ಯೆಗೆ ಕರೆ ಮಾಡಿ ವಿಚಾರಿದ ಯುವತಿ, ಅವರು ಸೂಚಿಸಿದಂತೆ 2023ರಜೂನ್ 28ರಿಂದ 2024ರ ಜನವರಿ12ರ ಅವಧಿಯಲ್ಲಿ ಹಂತ ಹಂತವಾಗಿ ಅವರು ತಿಳಿಸಿದ ಬ್ಯಾಂಕ್ ಖಾತೆಗಳಿಗೆ ಒಟ್ಟು ₹2.25 ಲಕ್ಷ ಪಾವತಿ ಮಾಡಿದ್ದರು. ಆದರೆ, ಆರೋಪಿಗಳು ಉದ್ಯೋಗ ನೀಡದೆ, ಪಡೆದುಕೊಂಡ ಹಣವನ್ನೂ ಹಿಂತಿರುಗಿಸದೆ  ವಂಚಿಸಿದ್ದಾರೆ. ಸಂಪ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT