ನಾಲ್ಕು ವರ್ಷಗಳ ಹಿಂದೆ ಇದೇ ರೀತಿ ನೀರಿನ ಹರಿವು ಕಡಿಮೆಯಾಗಿತ್ತು. ಈಗ ಮತ್ತೆ ಅದೇ ಸ್ಥಿತಿ ಮರುಕಳಿಸಿದೆ. ಹಿಂದಿನ ಮೂರು ವರ್ಷಗಳಲ್ಲಿ, ಜನವರಿಯಿಂದ ಆರಂಭಗೊಂಡು ಪ್ರತಿ ತಿಂಗಳು ಆಗಾಗ ಮಳೆ
ಆಗಿದ್ದಕ್ಕೆ ಕುಡಿಯುವ ನೀರಿನ ಸಮಸ್ಯೆ ಎದುರಾಗಿರಲಿಲ್ಲ. ಆದರೆ ಈ ವರ್ಷ ಈ ಭಾಗದಲ್ಲಿ ಮಳೆ ಆಗದೇ ಇರುವುದರಿಂದಾಗಿ ಕುಡಿಯುವ ನೀರಿಗೆ ತೊಂದರೆಯಾಗುವ ಆತಂಕ ಎದುರಾಗಿದೆ. ಉಪ್ಪಿನಂಗಡಿ ಗಯಾಪದ, ದಕ್ಷಿಣಕಾಶಿ ಎಂದೇ ಪ್ರತೀತಿ ಪಡೆದಿರುವು ದರಿಂದ ಆಸ್ತಿಕರು ನೇತ್ರಾವತಿ ಕುಮಾರ ಧಾರಾ ನದಿ ಸಂಗಮ ಸ್ಥಳದಲ್ಲಿ ಗತಿಸಿದ ಬಂಧುಗಳ ಅಸ್ಥಿ ವಿಸರ್ಜನೆ ಮಾಡಿ ಪಿಂಡ ಪ್ರಧಾನಾದಿ ಕಾರ್ಯಗಳನ್ನು ನೆರವೇರಿಸಿದ ಬಳಿಕ ನದಿಯಲ್ಲಿ ಪುಣ್ಯ ಸ್ನಾನ ಮಾಡುತ್ತಾರೆ. ನದಿ ಬತ್ತಿ ಹೋದ ಕಾರಣಕ್ಕೆ ಪುಣ್ಯ ತೀರ್ಥ ಸ್ನಾನಕ್ಕೆ ತೊಡಕು ಉಂಟಾಗಿದೆ.