‘37 ವರ್ಷಗಳಿಂದ ಸಂಘ, ಸಂಘಟನೆ, ಪಕ್ಷ ಎಂದು ಜೀವನ ಮುಡಿಪಾಗಿಟ್ಟಿದ್ದೇನೆ. ಪಕ್ಷ ನೀಡಿದ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿಭಾಯಿಸಿದ್ದೇನೆ. ಆದರೆ, ನನ್ನನ್ನು ಹೊರ ಹಾಕುವ ಪ್ರಯತ್ನ ನಡೆಯಿತು. ನನ್ನ ಮೇಲೆ ಇಲ್ಲಸಲ್ಲದ ಆರೋಪಗಳನ್ನು ಮಾಡಲಾಯಿತು. ಆದರೂ ನಾನು ಪಕ್ಷದ ಕುರಿತು ಯಾವುದೇ ಆರೋಪ ಮಾಡಿಲ್ಲ. ಹೀಗಿದ್ದರೂ ಸತ್ಯ ಮಾಡಿದ ತಪ್ಪಾದರೂ ಏನು’ ಎಂದು ಅವರು ಬಿಜೆಪಿಗರನ್ನು ಪ್ರಶ್ನಿಸಿದರು.