ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪುತ್ತೂರು: ನಾಯಿ ಕಚ್ಚಿ ಇಬ್ಬರಿಗೆ ಗಾಯ

Published 19 ಜನವರಿ 2024, 4:33 IST
Last Updated 19 ಜನವರಿ 2024, 4:33 IST
ಅಕ್ಷರ ಗಾತ್ರ

ಪುತ್ತೂರು: ನಾಯಿ ಕಚ್ಚಿ ಇಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಪುತ್ತೂರು ತಾಲೂಕಿನ ಒಳಮೊಗ್ರು ಗ್ರಾಮದ ಕುಂಬ್ರ ಸಮೀಪದ ಕೆದಂಬಾಡಿ ಗ್ರಾಮದ ಗಟ್ಟಮನೆ ಎಂಬಲ್ಲಿ ನಡೆದಿದೆ. ಹುಚ್ಚು ನಾಯಿ ಕಡಿದಿದೆ ಎಂಬ ಶಂಕೆ ವ್ಯಕ್ತವಾಗಿರುವುದರಿಂದ ಸ್ಥಳೀಯರಲ್ಲಿ ಆತಂಕ ಮೂಡಿದೆ.

ಕುಂಬ್ರದ ತರಕಾರಿ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿರುವ ಕೆದಂಬಾಡಿ ಗ್ರಾಮದ ಇದ್ಪಾಡಿಯ ಅಬೂಬಕ್ಕರ್ ಮನೆಯಿಂದ ಅಂಗಡಿಗೆ ತೆರಳುತ್ತಿದ್ದಾಗ ನಾಯಿ  ಅವರ ಕಾಲಿಗೆ ಕಚ್ಚಿದೆ. ಅದೇ ಪರಿಸರದ ಮಹಿಳೆಯೊಬ್ಬರಿಗೂ ಅದೇ ನಾಯಿ ಕಚ್ಚಿ ಗಾಯಗೊಳಿಸಿದೆ. ಸಾಮಾಜಿಕ ಕಾರ್ಯಕರ್ತ ಅಶ್ರಫ್ ಸಾರೆಪುಣಿ ಎಂಬವರು ಸ್ಥಳೀಯ ಗ್ರಾಮ ಪಂಚಾಯಿತಿಗೆ ಹಾಗೂ ಕುಂಬ್ರದ ಶಾಲೆಗಳಿಗೆ ಈ ಬಗ್ಗೆ ಮಾಹಿತಿ ನೀಡಿದ್ದು, ಜನರಲ್ಲಿ ಜಾಗೃತಿ ಮೂಡಿಸುವಂತೆ ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT