ಕುಂಬ್ರದ ತರಕಾರಿ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿರುವ ಕೆದಂಬಾಡಿ ಗ್ರಾಮದ ಇದ್ಪಾಡಿಯ ಅಬೂಬಕ್ಕರ್ ಮನೆಯಿಂದ ಅಂಗಡಿಗೆ ತೆರಳುತ್ತಿದ್ದಾಗ ನಾಯಿ ಅವರ ಕಾಲಿಗೆ ಕಚ್ಚಿದೆ. ಅದೇ ಪರಿಸರದ ಮಹಿಳೆಯೊಬ್ಬರಿಗೂ ಅದೇ ನಾಯಿ ಕಚ್ಚಿ ಗಾಯಗೊಳಿಸಿದೆ. ಸಾಮಾಜಿಕ ಕಾರ್ಯಕರ್ತ ಅಶ್ರಫ್ ಸಾರೆಪುಣಿ ಎಂಬವರು ಸ್ಥಳೀಯ ಗ್ರಾಮ ಪಂಚಾಯಿತಿಗೆ ಹಾಗೂ ಕುಂಬ್ರದ ಶಾಲೆಗಳಿಗೆ ಈ ಬಗ್ಗೆ ಮಾಹಿತಿ ನೀಡಿದ್ದು, ಜನರಲ್ಲಿ ಜಾಗೃತಿ ಮೂಡಿಸುವಂತೆ ಮನವಿ ಮಾಡಿದ್ದಾರೆ.