ನೇಹಾ ಅವರ ಮನೆಗೆ ಭಾನುವಾರ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಇಂತಹ ಪ್ರಕರಣದಲ್ಲಿ ಜನಪ್ರತಿನಿಧಿಗಳು ತುಷ್ಟೀಕರಣ ರಾಜಕಾರಣ ಮಾಡಬಾರದು. ಎಲ್ಲರೂ ಒಂದಾಗಿ ನೇಹಾ ಕುಟುಂಬಕ್ಕೆ ನ್ಯಾಯ ಕೊಡಿಸಬೇಕು. ನ್ಯಾಯ ಸಿಗದಿದ್ದರೆ ಎಲ್ಲ ಸಂಘಟನೆಗಳು ಒಂದಾಗಿ ಹೋರಾಟ ನಡೆಸಲಿವೆ’ ಎಂದರು.