‘ಕೆಟ್ಟಿರುವ ಮೊಟ್ಟೆಯನ್ನು ವಿತರಿಸಲಾಗಿದೆ ಎಂಬ ದೂರು ಬಂದ ಹಿನ್ನೆಲೆಯಲ್ಲಿ ಗಂಗಾಪುರ ಪೇಟೆ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಲಾಗಿದೆ. ಅಲ್ಲಿನ ಸಿಬ್ಬಂದಿ ಹೊಸ ಮೊಟ್ಟೆಗಳನ್ನು ಉಳಿಸಿ, ಹಳೆಯವನ್ನು ಬೇಯಿಸಿ ಮಕ್ಕಳಿಗೆ ನೀಡಿದ್ದಾರೆ. ಇದರಿಂದ ಈ ಪ್ರಮಾದ ಆಗಿದೆ. ಅಂಗನವಾಡಿ ಶಿಕ್ಷಕಿಯನ್ನು ಅಮಾನತು ಮಾಡಿ, ಅಲ್ಲಿಗೆ ಬೇರೆಯವರನ್ನು ನಿಯೋಜಿಸಲಾಗಿದೆ’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಪರುಶುರಾಮ ಶೆಟ್ಟಪ್ಪನವರ ‘ಪ್ರಜಾವಾಣಿ’ಗೆ ತಿಳಿಸಿದರು.