ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೀರಾವರಿ ಯೋಜನೆ ಅನುಷ್ಠಾನಕ್ಕೆ ಬೊಮ್ಮಾಯಿಗೆ ಮತ ನೀಡಿ: ಸಂಸದ ಪ್ರತಾಪ ಸಿಂಹ

Published 29 ಏಪ್ರಿಲ್ 2024, 16:12 IST
Last Updated 29 ಏಪ್ರಿಲ್ 2024, 16:12 IST
ಅಕ್ಷರ ಗಾತ್ರ

ಲಕ್ಷ್ಮೇಶ್ವರ: ‘ಹಾವೇರಿ– ಗದಗ ಭಾಗದಲ್ಲಿ ನೀರಾವರಿ ಯೋಜನೆಗಳು ಅನುಷ್ಠಾನ ಆಗಬೇಕಾದರೆ ಬಸವರಾಜ ಬೊಮ್ಮಾಯಿ ಅವರನ್ನು ಸಂಸದರನ್ನಾಗಿ ಆಯ್ಕೆ ಮಾಡಬೇಕು’ ಎಂದು ಸಂಸದ ಪ್ರತಾಪ ಸಿಂಹ ಹೇಳಿದರು.

ಪಟ್ಟಣದಲ್ಲಿ ಸೋಮವಾರ ರೋಡ್ ಶೋ ಮೂಲಕ ಮತಯಾಚನೆ ಮಾಡಿ ಅವರು ಮಾತನಾಡಿದರು.

‘ಬಸವರಾಜ ಬೊಮ್ಮಾಯಿ ಅವರು ಉತ್ತರ ಕರ್ನಾಟಕದ ಸಮರ್ಥ ನಾಯಕರಾಗಿದ್ದಾರೆ. ನೀರಾವರಿ ಖಾತೆ ಸಚಿವರಾಗಿ ಅವರು ಸಾಕಷ್ಟು ಅನುಭವ ಪಡೆದಿದ್ದಾರೆ. ಅಲ್ಲದೆ ಈ ಭಾಗದ ನೀರಾವರಿ ಯೋಜನೆಗಳ ಬಗ್ಗೆ ಅರಿವು ಹೊಂದಿದ್ದಾರೆ. ಆದ್ದರಿಂದ ಅವರನ್ನು ಗೆಲ್ಲಿಸುವುದರ ಮೂಲಕ ಕ್ಷೇತ್ರದ ಅಭಿವೃದ್ಧಿಯಲ್ಲಿ ಎಲ್ಲ ಮತದಾರರು ಭಾಗಿ ಆಗಬೇಕು’ ಎಂದರು.

ಭರತ್‌ ಬೊಮ್ಮಾಯಿ, ಡಾ.ಚಂದ್ರು ಲಮಾಣಿ, ಸುನಿಲ ಮಹಾಂತಶೆಟ್ಟರ, ಸಣ್ಣವೀರಪ್ಪ ಹಳ್ಳೆಪ್ಪನವರ, ಶಿವಪ್ರಕಾಶ ಮಹಾಜನಶೆಟ್ಟರ, ಶಂಕ್ರಣ್ಣ ಕಾಳೆ, ಶಕ್ತಿ ಕತ್ತಿ, ದುಂಡೇಶ ಕೊಟಗಿ, ಎಂ.ಆರ್. ಪಾಟೀಲ, ನಿಂಗಪ್ಪ ಬನ್ನಿ, ಸಂತೋಷ ಜಾವೂರ ಸೇರಿದಂತೆ ಅನೇಕರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT