ಪಟ್ಟಣ ಪಂಚಾಯ್ತಿಗೆ ಸಾಕಷ್ಟು ಸಾರಿ ಈ ಬಗ್ಗೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಪಟ್ಟಣ ಪಂಚಾಯ್ತಿ ಅಧಿಕಾರಿಗಳು ಸ್ಥಳಕ್ಕೆ ಬಂದು ವೀಕ್ಷಣೆ ಮಾಡಿದ್ದಾರೆ. ಆದರೆ ಪರಿಹಾರ ಕಲ್ಪಿಸಿಲ್ಲ. ಚರಂಡಿ ನೀರು ಸರಾಗವಾಗಿ ಹರಿದು ಹೋಗದೆ ಇರುವುದರಿಂದ ಸೊಳ್ಳೆ ವಿಪರೀತವಾಗಿದ್ದು, ಡೆಂಗಿ, ಕಾಲರಾ ರೋಗ ಹರಡುವ ಕಾರ್ಖಾನೆಗಳಂತಾಗಿವೆ. ಇಲ್ಲಿ ವಾಸಿಸುವ ಪ್ರತಿ ಕುಟುಂಬದ ಚಿಕ್ಕಮಕ್ಕಳು, ವೃದ್ಧರು, ಒಂದಿಲ್ಲೊಂದು ಕಾಯಿಲೆಯಿಂದ ಬಳಲುವಂತಾಗಿದೆ ಎಂದು ಇಲ್ಲಿನ ನಿವಾಸಿ ಸಾದತ್ ಮುಲ್ಲಾ ‘ಪ್ರಜಾವಾಣಿ’ಗೆ ತಿಳಿಸಿದರು.