ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಪ್ರಧಾನಿ ಮೋದಿ ಅವರು ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಸೋಲುವ ಹತಾಶೆಯಿಂದ ಏನೇನೋ ಮಾತನಾಡುತ್ತಿದ್ದಾರೆ. ಕಾಂಗ್ರೆಸ್ ಪಕ್ಷ ಮಹಿಳೆಯರ ಮಂಗಳಸೂತ್ರವನ್ನು ಕಿತ್ತುಕೊಳ್ಳುವುದಾಗಿ ಸುಳ್ಳು ಹೇಳಿದ್ದಾರೆ. ಆದರೆ, ಅವರು ತಂದ ಕರಾಳ ಕೃಷಿ ಕಾಯ್ದೆಗಳನ್ನು ಹಿಂದಕ್ಕೆ ಪಡೆಯಲು ಒತ್ತಾಯಿಸಿ ಲಕ್ಷಾಂತರ ರೈತರು ದೆಹಲಿಯ ಗಡಿಗಳಲ್ಲಿ ಒಂದು ವರ್ಷದವರೆಗೆ ಮಳೆ, ಗಾಳಿ, ಚಳಿ ಎನ್ನದೇ ಧರಣಿ ಕುಳಿತಿದ್ದರು. ಆ ಸಂದರ್ಭದಲ್ಲಿಯೇ 700ಕ್ಕೂ ಅಧಿಕ ರೈತರು ಮೃತಪಟ್ಟರು. ಹೀಗಾಗಿ, ಆ ರೈತರ ಹೆಂಡತಿಯರ ಮಂಗಳಸೂತ್ರವನ್ನು ಕಳೆದವರು ಮೋದಿಯವರೇ’ ಎಂದು ಟೀಕಿಸಿದರು.