ತಾಲ್ಲೂಕಿನ ಯುವತಿಯೊಬ್ಬರ ವಿವಾಹವು ತುಮಕೂರು ಜಿಲ್ಲೆಯ ಯುವಕನೊಂದಿಗೆ ಇಲ್ಲಿನ ಕಲ್ಯಾಣಮಂಟಪದಲ್ಲಿ ನಡೆಯಬೇಕಿತ್ತು. ಶನಿವಾರ ಸಂಜೆ ತುಮಕೂರಿನಿಂದ ವರನ ಕಡೆಯವರು ಮಂಟಪಕ್ಕೆ ಬಂದಿದ್ದು, ರಾತ್ರಿಯ ಊಟದಲ್ಲಿ ಸಿಹಿತಿಂಡಿ ಇಲ್ಲ ಎಂಬ ಕಾರಣಕ್ಕೆ ವಿಚಾರಕ್ಕೆ ಗಲಾಟೆ ಆರಂಭವಾಯಿತು. ಮಂಟಪದಲ್ಲಿಯೇ ಮಾತಿನ ಚಕಮಕಿ, ತಳ್ಳಾಟ ನೂಕಾಟ ನಡೆಯಿತು. ಭಾನುವಾರ ಬೆಳಿಗ್ಗೆ ಅಂತಿಮವಾಗಿ ಪ್ರಕರಣ ಪೊಲೀಸ್ ಠಾಣೆಯ ಮೆಟ್ಟಿಲೇರಿತು.