ಬಂಗಾರಪೇಟೆಯಲ್ಲಿ ಸಿಡಿಲು ಬಡಿದು ಎರಡು ಹಸುಗಳು ಮೃತಪಟ್ಟಿವೆ. ಗಾಳಿ ಹಾಗೂ ಆಲ್ಲಿಕಲ್ಲು ಮಳೆಗೆ ಬೇತಮಂಗಲದಲ್ಲಿ ಬಾಳೆ, ಕ್ಯಾಪ್ಸಿಕಂ, ಟೊಮೆಟೊ, ಪಪ್ಪಾಯಿ ಬೆಳೆಗೆ ಹಾನಿ ಉಂಟಾಗಿದೆ. ಬಂಗಾರಪೇಟೆ ಪಟ್ಟಣದ ಕೆಲ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ.
ಕೋಲಾರ ನಗರದ ಕೆಲವೆಡೆ ತುಂತುರು ಮಳೆಯಾಯಿತು. ತಾಲ್ಲೂಕಿನ ತೊಟ್ಲಿ, ಕಾಕಿನತ್ತ, ಚಿತ್ತನಗಳ್ಳಿ, ಹೊರಟಿ ಅಗ್ರಹಾರ ಸುತ್ತಮುತ್ತಲಿನ ಹಳ್ಳಿಗಳಲ್ಲಿ ಸಂಜೆಯವರೆಗೆ ಸುರಿಯುತ್ತಲೇ ಇತ್ತು.
ಹವಾಮಾನ ಇಲಾಖೆ ಪ್ರಕಾರ ಮುಂದಿನ ನಾಲ್ಕೈದು ದಿನ ಜಿಲ್ಲೆಯ ವಿವಿಧೆಡೆ ಮಳೆಯಾಗುವ ಸಾಧ್ಯತೆ ಇದೆ.