‘ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡ ಕಾರಣ ಚಂದ್ರಶೇಖರ ಅರವ ಮನೆಯ ಗೃಹಬಳಕೆಯ ವಿದ್ಯುತ್ ಸಂಪರ್ಕವನ್ನು ಜೆಸ್ಕಾಂ ಸಿಬ್ಬಂದಿ ಕಡಿತಗೊಳಿಸಿದ್ದರು. ಅನಧಿಕೃತವಾಗಿ ಮತ್ತೆ ಸಂಪರ್ಕ ಪಡೆದುಕೊಂಡಿದ್ದಲ್ಲದೆ, ಕುಪಿತಗೊಂಡು ಸಿಬ್ಬಂದಿಗೆ ದೂರವಾಣಿ ಕರೆ ಮಾಡಿ, ನಾವು ಮನೆಯಲ್ಲಿ ಇಲ್ಲದ ವೇಳೆ ಸಂಪರ್ಕ ಏಕೆ ಕಡಿತಗೊಳಿಸಿದ್ದೀರಿ ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ.