ಜಿಲ್ಲೆಯ ರೈತರ ಆರ್ಥಿಕ ಶಕ್ತಿಗೆ ತೆಂಗಿನ ಮರಗಳೇ ಮೂಲ. ತೆಂಗಿನ ಕಾಯಿ, ಕೊಬ್ಬರಿ ಬೆಲೆ ಕಡಿಮೆ ಇದ್ದರೂ ಎಳನೀರಿನ ಬೆಲೆ ಉತ್ತಮವಾಗಿದೆ. ಏಷ್ಯಾ ಖಂಡದಲ್ಲಿಯೇ ದೊಡ್ಡ ‘ಎಳನೀರು ಮಾರುಕಟ್ಟೆ’ ಮದ್ದೂರಿನಲ್ಲಿದ್ದು, ನಿತ್ಯ ಕೋಟ್ಯಂತರ ರೂಪಾಯಿ ವಹಿವಾಟು ನಡೆಯುತ್ತದೆ. ಈ ಬಾರಿ ಉತ್ತಮ ಇಳುವರಿ ನಿರೀಕ್ಷೆಯಲ್ಲಿದ್ದ ರೈತರಿಗೆ ನಷ್ಟ ಎದುರಾಗಿದೆ.