ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆ.ಆರ್.ನಗರ | ಗದ್ದೆಗೆ ಉರುಳಿದ ಬಸ್: 40ಕ್ಕೂ ಹೆಚ್ಚು ಮಂದಿಗೆ ಗಾಯ

Published 6 ಮೇ 2024, 5:38 IST
Last Updated 6 ಮೇ 2024, 5:38 IST
ಅಕ್ಷರ ಗಾತ್ರ

ಕೆ.ಆರ್.ನಗರ (ಮೈಸೂರು ಜಿಲ್ಲೆ): ತಾಲ್ಲೂಕಿನ ಕೆಸ್ತೂರು ಕೊಪ್ಪಲು ಗೇಟ್ ಬಳಿ ಸೋಮವಾರ ಬೆಳಿಗ್ಗೆ ಭತ್ತದ ಗದ್ದೆಗೆ ಕೆಎಸ್‌ಆರ್‌ಟಿಸಿ ಬಸ್ ಉರುಳಿ 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ರಸ್ತೆಯಲ್ಲಿ ಚಲಿಸುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಉರುಳಿತು. ಬಸ್ ಬಿದ್ದ ರಭಸಕ್ಕೆ ಸೀಟುಗಳೆಲ್ಲ ಮುರಿದು ಒಂದರ ಮೇಲೊಂದು ಬಿದ್ದಿವೆ. ಚಾಲಕನ ಕೈ ಮುರಿದಿದ್ದು, ಕೆಲವು ಪ್ರಯಾಣಿಕರ ತಲೆಗೆ ತೀವ್ರ ಪೆಟ್ಟಾಗಿದೆ.

ಗಾಯಾಳುಗಳಿಗೆ ಕೆ.ಆರ್.ನಗರ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಮೈಸೂರಿನ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಬಸ್‌ನಲ್ಲಿ 70 ಪ್ರಯಾಣಿಕರಿದ್ದರು. ಗಾಯಗೊಂಡವರ ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT