ಕೃಷ್ಣಜನ್ಮಾಷ್ಠಮಿಯ ಅಂಗವಾಗಿ ಮಕ್ಕಳಿಗೆ ವೈದಿಕ ವೇಷಭೂಷಣ ಸ್ಪರ್ಧೆ, ಭಾವಪರವಶ ಕೀರ್ತನೆ, ಭಗವದ್ಗೀತೆ ಶ್ಲೋಕಗಳ ಪಠಣ, ಉಯ್ಯಾಲೆ ಸೇವೆ, ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ 30 ಶಾಲೆಗಳ 1,500 ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. ತೆಪ್ಪೋತ್ಸವ, ಪಲ್ಲಕ್ಕಿ ಸೇವೆ, ಮಹಾ ಅಭಿಷೇಕ ಮತ್ತು ಅನ್ನಸಂತರ್ಪಣೆ ಕಾರ್ಯಕ್ರಮ ನಡೆಯಲಿದೆ ಎಂದರು.