ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕನಕಪುರ: ಬೀದಿನಾಯಿಗಳ ದಾಳಿಗೆ ಜಿಂಕೆ ಬಲಿ

Published 6 ಮೇ 2024, 14:36 IST
Last Updated 6 ಮೇ 2024, 14:36 IST
ಅಕ್ಷರ ಗಾತ್ರ

ಕನಕಪುರ: ನೀರು ಮತ್ತು ಮೇವು ಅರಸಿ ಕಾಡಿನಿಂದ ಶನಿವಾರ ಹಲಸಿನಮರದೊಡ್ಡಿ ಗ್ರಾಮಕ್ಕೆ ಬಂದಿದ್ದ ಜಿಂಕೆಯೊಂದರ ಮೇಲೆ ಬೀದಿನಾಯಿಗಳು ದಾಳಿ ನಡೆಸಿದ ಪರಿಣಾಮ ಜಿಂಕೆ ಸಾವಿಗೀಡಾಗಿದೆ.

ಸಾವಿಗೀಡಾದ ಜಿಂಕೆಗೆ ಸುಮಾರು ಆರು ವರ್ಷ ಇರಬಹುದು ಎನ್ನಲಾಗಿದೆ. ಮೇವು ಅರಸಿ ಗ್ರಾಮಕ್ಕೆ ಬಂದಿದ್ದ ಜಿಂಕೆ ಮೇಲೆ ಸುಮಾರು 15 ಬೀದಿನಾಯಿಗಳು ಗುಂಪಾಗಿ ದಾಳಿ ನಡೆಸಿವೆ. ಈ ವೇಳೆ ಗ್ರಾಮಸ್ಥರು ಬೀದಿನಾಯಿಗಳನ್ನು ಓಡಿಸಿ ಗಾಯಗೊಂಡಿದ್ದ ಜಿಂಕೆಯನ್ನು ರಕ್ಷಿಸಿ ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

ಗಾಯಗೊಂಡಿದ್ದ ಜಿಂಕೆಯನ್ನು ಸಾತನೂರಿನ ವಲಯ ಅರಣ್ಯಾಧಿಕಾರಿಗಳಿಗೆ ಒಯ್ದು ಪಶುವೈದ್ಯರಿಂದ ಚಿಕಿತ್ಸೆ ಕೊಡಿಸಲಾಗಿತ್ತು. ಆದರೆ, ಗಂಭೀರ ಗಾಯಗೊಂಡಿದ್ದ ಜಿಂಕೆ ಸಾವಿಗೀಡಾಗಿದೆ.

 ಅರಣ್ಯ ಇಲಾಖೆಯ ನಿಯಮಾನುಸಾರ ಜಿಂಕೆಯ ಮೃತದೇಹದ ಸಂಸ್ಕಾರ ನಡೆಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT