ನಗರದಲ್ಲಿ ನೀರಿನ ಸಮಸ್ಯೆ ನಿವಾರಿಸಲು ನಗರಸಭೆಯು ಅರ್ಕಾವತಿ ನದಿಯಿಂದ ಕನಕಪುರಕ್ಕೆ ಪೈಪ್ ಮೂಲಕ ನೀರು ಪೂರೈಕೆ ಮಾಡುತ್ತದೆ. ಈಗ ಬೇಸಿಗೆ ಇರುವುದರಿಂದ ನಗರದ ಕೆಲ ಬೋರ್ವೆಲ್ಗಳಲ್ಲಿ ಅಂತರ್ಜಲ ಕಡಿಮೆಯಾಗಿ ನೀರಿನ ಅಭಾವ ಸೃಷ್ಟಿಯಾಗಿದೆ. ಇಂತಹ ಸಂದರ್ಭದಲ್ಲಿ ನಗರಕ್ಕೆ ಪ್ರಮುಖವಾಗಿ ನೀರು ಪೂರೈಕೆ ಮಾಡುತ್ತಿದ್ದ ಪೈಪ್ ಒಡೆದಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.