ಹೋಬಳಿಯ ಮರೂರು ಗ್ರಾಮದ ಪಾಪಣ್ಣ ಎಂಬುವರ ತೋಟದಲ್ಲಿ ಇಟ್ಟಿದ್ದ ಬೋನಿಗೆ ಮೂರು ವರ್ಷದ ಗಂಡು ಚಿರತೆ ಸೆರೆಯಾಗಿದೆ. ಒಂದು ತಿಂಗಳಿಂದ ಗ್ರಾಮದ ಬಳಿ ಚಿರತೆ ಪ್ರತ್ಯಕ್ಷವಾಗುತ್ತಿದ್ದು, ಹಸು, ಕರು, ಮೇಕೆಗಳ ಮೇಲೆ ನಿರಂತರ ದಾಳಿ ನಡೆಸಿ, ರೈತರ ನಿದ್ದೆಗೆಡಿಸಿತ್ತು. ಈ ಬಗ್ಗೆ ರೈತರು ಅರಣ್ಯ ಇಲಾಖೆಗೆ ದೂರು ನೀಡಿದ್ದರು. ಅರಣ್ಯ ಇಲಾಖೆ ಎರಡು ದಿನಗಳ ಹಿಂದೆ ಇಟ್ಟಿದ್ದ ಬೋನಿಗೆ ಶುಕ್ರವಾರ ಮುಂಜಾನೆ ಚಿರತೆ ಸೆರೆಯಾಗಿದೆ. ಇದರಿಂದ ಗ್ರಾಮಸ್ಥರು ನಿಟ್ಟುಸಿರುಬಿಟ್ಟಿದ್ದಾರೆ.