ಇವರು ಕೃಷಿಯಲ್ಲಿನ ಸಾಧನೆಗಾಗಿ ಕೃಷಿ ಪ್ರಶಸ್ತಿಗೂ ಭಾಜನರಾಗಿದ್ದಾರೆ. ತಂದೆಯವರಿಂದ ಸಿಕ್ಕ ಒಂದು ಎಕರೆ ಜಮೀನಿನಲ್ಲಿ ಕೃಷಿ ಚಟುವಟಿಕೆ ಆರಂಭಿಸಿ 20 ವರ್ಷಗಳು ಕಳೆದಿವೆ. ಇದೀಗ ಅವರು ಐದೂವರೆ ಎಕರೆ ಜಮೀನಿನ ಒಡೆಯರಾಗಿದ್ದು, ಇದರಲ್ಲಿ ಭತ್ತ, ಅಡಿಕೆ, ತೆಂಗು, ಕಬ್ಬು, ಶುಂಠಿ ಬೆಳೆಯುವ ಮೂಲಕ ಸಮಗ್ರ ಕೃಷಿ ಪದ್ಧತಿ ಅನುಸರಿಸುತ್ತಿದ್ದಾರೆ. ಈ ಮೂಲಕ ಯಶಸ್ಸಿನ ಹಾದಿ ತುಳಿದಿದ್ದಾರೆ.