‘ಬಜೆಟ್ ಕುರಿತ ಎಲ್ಲ ಚರ್ಚೆಗಳು ಪೂರ್ಣಗೊಂಡಿವೆ. ಎರಡು ದಿನಗಳಲ್ಲಿ ಅಂತಿಮ ರೂಪ ನೀಡಲಾಗುವುದು. ಸವಾಲುಗಳನ್ನು ಅವಕಾಶವಾಗಿ ಪರಿವರ್ತಿಸಿ, ರಾಜ್ಯವನ್ನು ಅಭಿವೃದ್ಧಿ ಪಥದತ್ತ ತೆಗೆದುಕೊಂಡು ಹೋಗಲು ದೃಢ ಹೆಜ್ಜೆ ಇಡುತ್ತೇನೆ. ಉಪ ಚುನಾವಣೆ ನಡೆಯುವ ಕ್ಷೇತ್ರಗಳಿಗೆ ಯಾವುದೇ ವಿಶೇಷ ಅನುದಾನ ಘೋಷಣೆ ಮಾಡುವುದಿಲ್ಲ. ಈಗಾಗಲೇ ಆ ಕ್ಷೇತ್ರಗಳಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗಿದೆ. ನಾಲ್ಕೂ ಕ್ಷೇತ್ರಗಳಲ್ಲೂ ಗೆಲುವು ನಮ್ಮದೆ’ ಎಂದರು.