ಬುಧವಾರ, 15 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊರಟಗೆರೆ: ಎಲೆರಾಂಪುರ ಮಠದಿಂದ ದಿನಸಿ ವಿತರಣೆ 

Published 27 ಏಪ್ರಿಲ್ 2024, 14:16 IST
Last Updated 27 ಏಪ್ರಿಲ್ 2024, 14:16 IST
ಅಕ್ಷರ ಗಾತ್ರ

ಕೊರಟಗೆರೆ: ತಾಲ್ಲೂಕಿನ ಹೊಳವನಹಳ್ಳಿ ಹೋಬಳಿ ಕ್ಯಾಮೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಂಪುಗಾನಹಳ್ಳಿಯಲ್ಲಿ ಶುಕ್ರವಾರ ಬೆಂಕಿ ತಗುಲಿ 9 ಗುಡಿಸಲು ಭಸ್ಮವಾಗಿ ಸೂರು ಕಳೆದುಕೊಂಡಿದ್ದ ಕುಟುಂಬಗಳಿಗೆ ಎಲೆರಾಂಪುರದ ಕುಂಚಿಟಿಗ ಮಹಾಸಂಸ್ಥಾನ ಮಠದ ಹನುಮಂತನಾಥ ಸ್ವಾಮೀಜಿ ಶನಿವಾರ ದಿನ ಬಳಕೆ ವಸ್ತುಗಳನ್ನು ನೀಡಿದರು.

ನಂತರ ಮಾತನಾಡಿದ ಸ್ವಾಮೀಜಿ, ಆಕಸ್ಮಿಕ ಅವಘಡಗಳಿಗೆ ಯಾರೂ ಹೊರತಾಗಿಲ್ಲ. ಚಿಂಪುಗಾನಹಳ್ಳಿಯಲ್ಲಿ ಬೆಂಕಿ ಅವಘಡ ಎರಡನೇ ಬಾರಿಗೆ ಸಂಭವಿಸಿ 10ಕ್ಕೂ ಹೆಚ್ಚು ಕುಟುಂಬಗಳು ಸೂರು ಕಳೆದುಕೊಂಡು ಬೀದಿ ಪಾಲಾಗಿವೆ. ಅವರಿಗೆ ಕನಿಷ್ಠ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಮಠದಿಂದ ದಿನಸಿ ಸಾಮಗ್ರಿ ಸೇರಿದಂತೆ ಅಗತ್ಯ ವಸ್ತುಗಳನ್ನು ನೀಡಲಾಗಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT