ನಂತರ ಮಾತನಾಡಿದ ಸ್ವಾಮೀಜಿ, ಆಕಸ್ಮಿಕ ಅವಘಡಗಳಿಗೆ ಯಾರೂ ಹೊರತಾಗಿಲ್ಲ. ಚಿಂಪುಗಾನಹಳ್ಳಿಯಲ್ಲಿ ಬೆಂಕಿ ಅವಘಡ ಎರಡನೇ ಬಾರಿಗೆ ಸಂಭವಿಸಿ 10ಕ್ಕೂ ಹೆಚ್ಚು ಕುಟುಂಬಗಳು ಸೂರು ಕಳೆದುಕೊಂಡು ಬೀದಿ ಪಾಲಾಗಿವೆ. ಅವರಿಗೆ ಕನಿಷ್ಠ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಮಠದಿಂದ ದಿನಸಿ ಸಾಮಗ್ರಿ ಸೇರಿದಂತೆ ಅಗತ್ಯ ವಸ್ತುಗಳನ್ನು ನೀಡಲಾಗಿದೆ ಎಂದರು.