ಜನರು ಪಟ್ಟಣಗಳತ್ತ ಗುಳೆ ಹೋಗುವುದನ್ನು ತಪ್ಪಿಸಲು ಸರ್ಕಾರ ಬರ ಪರಿಹಾರ ಕಾಮಗಾರಿ, ಆಹಾರ ಭದ್ರತೆ ಬಲಪಡಿಸುವುದು, ಪಂಚಾಯಿತಿಗೊಂದು ಗೋಶಾಲೆ ತೆರೆಯುವುದು, ಕುಡಿಯುವ ನೀರು ಒದಗಿಸಬೇಕು. ಎಕರೆಗೆ ಕನಿಷ್ಠ ₹10 ಸಾವಿರ ಪರಿಹಾರ ನೀಡುವ ಕಾರ್ಯ ತುರ್ತಾಗಿ ಮಾಡಬೇಕು ಎಂದು ಜಿಲ್ಲಾ ರೈತ ಸಂಘದ ಪ್ರದಾನ ಕಾರ್ಯದರ್ಶಿ ಶಂಕರಪ್ಪ ಗಿರೇಗೌಡನಹಳ್ಳಿ ಒತ್ತಾಯಿಸಿದರು.