ಈಚೆಗೆ ಗೋಹತ್ಯೆ, ಗೋಸಾಗಾಟ ಮುಲಾಜಿಲ್ಲದೆ ನಡೆಯುತ್ತಿರುವುದು ತೀರಾ ಆತಂಕಕಾರಿ. ಗೋವಿನ ಸಂಕುಲ ಉಳಿಸಲು ಸಮಾಜ ಕಂಕಣಬದ್ಧರಾಗಬೇಕು. ಬೀಡಾಡಿ ದನಗಳನ್ನು ರಕ್ಷಿಸಲು ಸರ್ಕಾರ ತುರ್ತು ಕ್ರಮ ತೆಗೆದುಕೊಳ್ಳಬೇಕು. ಬೆಜ್ಜವಳ್ಳಿ ದುರ್ಘಟನೆಯಲ್ಲಿ ಗಾಯಗೊಂಡವರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಬೇಕು. ಕಾರ್ಯಕರ್ತರು ಶೀಘ್ರ ಗುಣಮುಖರಾಗಲೆಂದು ದೇವರಲ್ಲಿ ಪ್ರಾರ್ಥಿಸುವುದಾಗಿ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ತಿಳಿಸಿದ್ದಾರೆ.