ಶುಕ್ರವಾರ, 17 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಪರಿಸರದ ಜೊತೆ ಭಾವನಾತ್ಮಕ ಬೆಸುಗೆಯಾಗಲಿ’

Published 30 ಏಪ್ರಿಲ್ 2024, 15:44 IST
Last Updated 30 ಏಪ್ರಿಲ್ 2024, 15:44 IST
ಅಕ್ಷರ ಗಾತ್ರ

ಕೋಟ (ಬ್ರಹ್ಮಾವರ): ಮಕ್ಕಳಿಗೆ ಎಳವೆಯಿಂದಲೇ ಪರಿಸರದ ಜೊತೆ ಭಾವನಾತ್ಮಕ ಬೆಸುಗೆಯಾಗಬೇಕು. ಪರಿಸರ ಸಂರಕ್ಷಣೆಯ ಕಾಳಜಿ ಅವರ ಮನದಲ್ಲಿ ಮೂಡಿದಾಗ ಇನ್ನಷ್ಟು ಕ್ರಾಂತಿಕಾರಿ ಬದಲಾವಣೆಗೆ ನಾಂದಿಯಾಗುತ್ತದೆ ಎಂದು ಪತ್ರಕರ್ತ ರವೀಂದ್ರ ಕೋಟ ಹೇಳಿದರು.

ಇಲ್ಲಿನ ಕಾರಂತ ಥೀಂ ಪಾರ್ಕ್‌ನಲ್ಲಿ ಶಿವರಾಮ ಕಾರಂತ ಪ್ರತಿಷ್ಠಾನ, ಕೋಟತಟ್ಟು ಗ್ರಾಮ ಪಂಚಾಯಿತಿ, ಅರಿವು ಕೇಂದ್ರ ಡಿಜಿಟಲ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ, ಮಣೂರು ಪಡುಕೆರೆ ಗೀತಾನಂದ ಫೌಂಡೇಷನ್, ಉಸಿರು ಸಂಸ್ಥೆ, ಆಶ್ರಯದಲ್ಲಿ ದಿ.ಕೆ.ಸಿಕುಂದರ್ ಸ್ಮರಣಾರ್ಥ ನಡೆಯುತ್ತಿರುವ 24ನೇ ವರ್ಷದ ಬೇಸಿಗೆ ಶಿಬಿರ ‘ವಿಕಸನ’ದ 2ನೇ ದಿನದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಸಂಪನ್ಮೂಲ ವ್ಯಕ್ತಿಗಳಾದ ಗಿರೀಶ್ ಆಚಾರ್ಯ ವಕ್ವಾಡಿ, ಸುಮನ ಹೇರ್ಳೆ, ಮಂಜುನಾಥ ಗುಂಡ್ಮಿ, ಪ್ರದೀಪ್ ಬಸ್ರೂರು, ಶಿಬಿರದ ನಿರ್ದೇಶಕ ನರೇಂದ್ರ ಕುಮಾರ್ ಕೋಟ, ಸತೀಶ ವಡ್ಡರ್ಸೆ, ಶಿಬಿರದ ತಂಡಗಳ ನಾಯಕರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT