‘ಶಕ್ತಿ ಯೋಜನೆಯಿಂದ ಮಹಿಳೆಯರು ದೇವಸ್ಥಾನಗಳಿಗೆ ಬರುವ ಸಂಖ್ಯೆ ಹೆಚ್ಚಿದೆ. ಜತೆಗೆ ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್ ಅವರ ಮಾರ್ಗದರ್ಶನದಂತೆ ಹಂಪಿ ವಿರೂಪಾಕ್ಷ ದೇವಸ್ಥಾನ ಸಹಿತ ಕೆಲವು ದೇವಸ್ಥಾನಗಳಲ್ಲಿ ಕೈಗೊಂಡ ಕ್ರಮಗಳಿಂದಾಗಿ ದೇವಾಲಯಗಳ ಆದಾಯದಲ್ಲಿ ಹೆಚ್ಚಳವಾಗಿದೆ. ದೇವಾಲಯಗಳ ಆದಾಯ ಹೆಚ್ಚಳಗೊಂಡರೆ ಅದು ಮತ್ತೆ ಧಾರ್ಮಿಕ ಕಾರ್ಯಗಳು, ದೇವಾಲಯಗಳ ಅಭಿವೃದ್ಧಿ, ವೇದಾಧ್ಯಯನ, ಗೋಶಾಲೆ ನಿರ್ವಹಣೆಯಂತಹ ಕೆಲಸಗಳಿಗೆ ಬಳಕೆಯಾಗುತ್ತವೆ, ಹೊಸಪೇಟೆ ತಾಲ್ಲೂಕಿನ ದೇವಸ್ಥಾನಗಳಲ್ಲಿ ಮೂಲಸೌಲಭ್ಯ ಹೆಚ್ಚಿಸಿ ಭಕ್ತರಿಗೆ ಅನುಕೂಲ ಮಾಡಿಕೊಡುವ ಕೆಲಸಗಳೂ ನಡೆಯುತ್ತಿವೆ’ ಎಂದು ಈ ದೇವಸ್ಥಾನಗಳ ಆಡಳಿತಾಧಿಕಾರಿ ಹನುಮಂತಪ್ಪ ‘ಪ್ರಜಾವಾಣಿ’ಗೆ ತಿಳಿಸಿದರು.