ಬುಧವಾರ, 15 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಹಳೆಯ ಆಚಾರಕ್ಕೆ ಹೊಸ ವಿಚಾರ ಸೇರಿಸಿ ಸಂಶೊಧನೆ ಮಾಡಿ’

Published 28 ಏಪ್ರಿಲ್ 2024, 4:32 IST
Last Updated 28 ಏಪ್ರಿಲ್ 2024, 4:32 IST
ಅಕ್ಷರ ಗಾತ್ರ

ಪ್ರಜಾವಾಣಿ ವಾರ್ತೆ ‌‌

ವಿಜಯಪುರ: ದೇಶದ ಹಳೆಯ ಆಚಾರಗಳಿಗೆ ಆಧುನಿಕ ವಿಚಾರಗಳನ್ನು ಸೇರಿಸಿದರೆ ಸಂಶೋಧನೆಯಲ್ಲಿ ಹೊಸ ದಾರಿಯನ್ನು ಕಾಣಬಹುದು ಎಂದು ಬಿ.ಎಲ್.ಡಿ.ಇ ಸಂಸ್ಥೆಯ ಮುಖ್ಯ ಆಡಳಿತಾಧಿಕಾರಿ ಡಾ.ಆರ್.ಬಿ. ಕೊಟ್ನಾಳ ಹೇಳಿದರು.

ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎ.ವಿ.ಎಸ್. ಆಯುರ್ವೇದ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನೆ ಕೇಂದ್ರದಲ್ಲಿ ಶನಿವಾರ ನಡೆದ ಅನುಸಂಧಾನ-2024 ಒಂದು ದಿನದ ರಾಷ್ಟ್ರಮಟ್ಟದ ವಿಚಾರ ಸಂಕೀರ್ಣ ಉದ್ಘಾಟಿಸಿ ಮಾತನಾಡಿದರು.

ಭವ್ಯ ಭಾರತದ ಸಸ್ಯ ಸಂಪತ್ತು ಅತ್ಯದ್ಭುತವಾಗಿದ್ದು ಸಮಸ್ತ ಮನುಕುಲಕ್ಕೆ ಅದರ ಮಹತ್ವ ತಿಳಿಸುವುದು ಭಾವಿ ವೈದ್ಯ ಸಂಶೋಧಕರ ಜವಾಬ್ದಾರಿಯಾಗಿದೆ ಎಂದು ತಿಳಿಸಿದರು.

ಗದಗ ಡಿಜಿಎಂ ಆಯುರ್ವೇದ ಮೆಡಿಕಲ್ ಕಾಲೇಜಿನ ಪ್ರಾಚಾರ್ಯ ಡಾ.ಸಂತೋಷ ಬೆಳವಡಿ ಮಾತನಾಡಿ, ಕಾಲಕಾಲಕ್ಕೆ ಸಂಶೋಧನೆ ಕುರಿತು ವಿಚಾರ ಸಂಕಿರಣಗಳು ಅವಶ್ಯವಾಗಿವೆ. ಆಧುನಿಕ ಯುಗಕ್ಕೆ ತಕ್ಕಂತೆ ಭಾರತದ ಮೂಲ ಮತ್ತು ಪುರಾತನ ವಿಜ್ಞಾನವನ್ನು ಸೇರಿಸಿ ಹೊಸ ತಂತ್ರಜ್ಞಾನಗಳ ಆಧಾರಿತ ವನಸ್ಪತಿ ದ್ರವ್ಯಗಳ ಸಂಶೋಧನೆ ನಡೆಸಬೇಕು. ಅದಕ್ಕೆ ತಕ್ಕಂತೆ ಸತ್ಯ ಸಾಕ್ಷಿ ದೃಢೀಕರಣ ಮಾಡಿ ಜಗತ್ತಿನ ವೈಜ್ಞಾನಿಕ ಲೋಕದಲ್ಲಿ ಹೊಸ ಸಾಧನೆ ಮಾಡಬೇಕು ಎಂದು ಹೇಳಿದರು.

ಕಾಲೇಜಿನ ಪ್ರಾಚಾರ್ಯ ಡಾ. ಸಂಜಯ ಕಡ್ಲಿಮಟ್ಟಿ ಮಾತನಾಡಿ, ಇಂದಿನ  ಯುಗದಲ್ಲಿ ಸಸ್ಯ ಸಂಜೀವಿನಿ ವಿದೇಶಗಳಲ್ಲಿ ಹೆಚ್ಚು ಉಪಯೋಗವಾಗುತ್ತಿದೆ. ಜಾಗತಿಕ ಮಟ್ಟದಲ್ಲಿ ಸಂಶೊಧನೆ ಮಾಡಿ ದಾಖಲೆ ನೀಡಬೇಕಾಗಿದೆ ಎಂದರು. 

ಅನುಸಂಧಾನ ವಿಚಾರ ಸಂಕಿರಣದಲ್ಲಿ ಕರ್ನಾಟಕ, ಮಹಾರಾಷ್ಟ್ರ, ಕೇರಳ ರಾಜ್ಯಗಳಿಂದ ವಿವಿಧ ಆಯುರ್ವೇದ, ಯುನಾನಿ, ಫಾರ್ಮಸಿ, ನರ್ಸಿಂಗ್, ವಿಭಾಗಗಳ ಸ್ನಾತಕೋತ್ತರ ಹಾಗೂ ಪಿ.ಎಚ್.ಡಿ ವಿದ್ಯಾರ್ಥಿಗಳು ಸೇರಿದಂತೆ 150 ಕ್ಕೂ ಹೆಚ್ಚು ಸಂಶೋಧಕರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT