ಹೊಟ್ಟೆ ನೋವಿನಿಂದ ಬಳಲುತ್ತಿದ್ದ ತಾಲ್ಲೂಕಿನ ಸಿಂಗನಹಳ್ಳಿ ಗ್ರಾಮದ ಮುಸ್ಲಿಂ ಬಾಲಕಿ ಒಬ್ಬಳು ನಗರದ ಸರ್ಕಾರಿ ಆಸ್ಪತ್ರೆಗೆ ದಾಖಲಾದರು. ವೈದ್ಯರು ಎಲ್ಲಾ ತಪಾಸಣೆ ಮಾಡಿ ಸ್ಕ್ಯಾನಿಂಗ್ ಮಾಡಿದಾಗ ಹೊಟ್ಟೆಯಲ್ಲಿ ಗಡ್ಡೆ ಇರುವುದು ಪತ್ತೆಯಾಯಿತು. ಬಾಲಕಿಯ ಆರೋಗ್ಯದಲ್ಲಿ ತುಸು ವ್ಯತ್ಯಾಸ ಕಂಡು ಬಂದು ರಕ್ತಹೀನತೆ ಕಾಣಿಸಿತು. ಆಗ ಎರಡು ಬಾಟಲಿ ರಕ್ತ ಕೊಟ್ಟು ನಂತರ ಚಿಕಿತ್ಸೆ ಮಾಡಿದೆ. ಬಾಲಕಿ ಆರೋಗ್ಯವಾಗಿದ್ದಾರೆ ಎನ್ನುತ್ತಾರೆ ಶಸ್ತ್ರ ಚಿಕಿತ್ಸೆ ನಡೆಸಿದ ಡಾ.ಯಲ್ಲಪ್ಪ ಪಾಟೀಲ ಹುಲಕಲ್.